ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸಪೇಟೆ: 10 ಸಾವಿರ ರೂ ಗೆ ನವಜಾತ ಹೆಣ್ಣು ಶಿಶು ಮಾರಾಟ; ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಹೊಸಪೇಟೆ ತಾಲ್ಲೂಕಿನ ಕಮಲಾಪುರ ಗ್ರಾಮದ ಮಹಿಳೆಯೊಬ್ಬರು ಆಗಸ್ಟ್ 26 ರಂದು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೇವಲ ಐದು ದಿನಗಳ ನಂತರ, ಶಿಶುವನ್ನು ಹಗರಿಬೊಮ್ಮನಹಳ್ಳಿ ನಿವಾಸಿ ಕರಿಬಸಪ್ಪ ಎಂಬುವವರಿಗೆ ಮಾರಾಟ ಮಾಡಲಾಗಿದೆ .

ಹೊಸಪೇಟೆ: ಹೊಸಪೇಟೆಯಲ್ಲಿರುವ ಸರ್ಕಾರಿ ಸ್ವಾಮ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಹೆಣ್ಣು ಮಗುವನ್ನು 10,000 ರೂ.ಗೆ ಮಾರಾಟ ಮಾಡಲಾಗಿದೆ ಎಂಬ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 31 ರಂದು ಈ ಘಟನೆ ನಡೆದಿದ್ದು, ಇಬ್ಬರು ಆಶಾ ಕಾರ್ಯಕರ್ತರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೊಸಪೇಟೆ ತಾಲ್ಲೂಕಿನ ಕಮಲಾಪುರ ಗ್ರಾಮದ ಮಹಿಳೆಯೊಬ್ಬರು ಆಗಸ್ಟ್ 26 ರಂದು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೇವಲ ಐದು ದಿನಗಳ ನಂತರ, ಶಿಶುವನ್ನು ಹಗರಿಬೊಮ್ಮನಹಳ್ಳಿ ನಿವಾಸಿ ಕರಿಬಸಪ್ಪ ಎಂಬುವವರಿಗೆ ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಸಹಾಯವಾಣಿಗೆ ಬಂದ ಸುಳಿವು ಆಧರಿಸಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ (ಡಿಸಿಪಿಯು) ಸಂಯೋಜಕ ಚಿದಾನಂದ್ ದೂರು ದಾಖಲಿಸಿದ್ದಾರೆ. ಆಸ್ಪತ್ರೆಯಿಂದ ಯಾರೋ ಒಬ್ಬರು ಅಧಿಕಾರಿಗೆ ಸುಳಿವು ನೀಡಿದ ನಂತರ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಧಿತ ಆಶಾ ಕಾರ್ಯಕರ್ತೆಯರನ್ನು ಕವಿತಾ ಎಂ ಮತ್ತು ನಾಗರತ್ನ ಎಂದು ಗುರುತಿಸಲಾಗಿದೆ. ಇಬ್ಬರು ಆಶಾ ಕಾರ್ಯಕರ್ತರು ತಾಯಿಯ ಮನವೊಲಿಸಿ ಮಗುವನ್ನು ಮಾರಾಟ ಮಾಡಲು ಹಣ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ರಕ್ಷಿಸಲಾಗಿದೆ. ಮಗುವನ್ನು ಸರ್ಕಾರ ನಡೆಸುವ ವಿಶೇಷ ದತ್ತು ಕೇಂದ್ರದ ಆರೈಕೆಯಲ್ಲಿ ಇರಿಸಲಾಗಿದೆ. ದೂರಿನಲ್ಲಿ ಕವಿತಾ ಮತ್ತು ಮಣಿಮಾಲಾ ಹೆಸರಿದ್ದು, ಇನ್ನಿಬ್ಬರು ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ವಿಧಾನಸಭಾ ಚುನಾವಣೆ 2025: Exit Poll Results ಬಹಿರಂಗ; ಯಾರಿಗೆ ಎಷ್ಟು ಸ್ಥಾನ?- ಇಲ್ಲಿದೆ ಮಾಹಿತಿ

Delhi Blast: ಆಪರೇಷನ್ ಸಿಂದೂರ್ ಗೆ ಸೇಡು... 20 ಟೈಮರ್, 3000 ಕೆಜಿ ಸ್ಫೋಟಕ.. ಉಗ್ರರ ಯೋಜನೆ ಕಾರ್ಯಗತವಾಗಿದ್ದರೇ ಇತಿಹಾಸದ ಅತೀ ದೊಡ್ಡ 'ಭಯೋತ್ಪಾದಕ ದಾಳಿ'!

Delhi Red Fort blast: ಸ್ಪೂಟಕ್ಕೂ ಮುನ್ನ 3 ಗಂಟೆ ಕಾರು ಪಾರ್ಕಿಂಗ್! ನಿರ್ಣಾಯಕ 'ಮೂರು ಆಯಾಮ'ಗಳಲ್ಲಿ ಪೊಲೀಸರ ತನಿಖೆ

Bihar Elections: ಎರಡನೇ ಹಂತದಲ್ಲಿ ದಾಖಲೆಯ ಶೇ. 67.14 ರಷ್ಟು ಮತದಾನ

ಕೆಂಪು ಕೋಟೆ ಬಳಿಯ ಸ್ಫೋಟ: ದಿನಬಳಕೆಯ ವಸ್ತುಗಳು ಭಯೋತ್ಪಾದನೆಯ ಆಯುಧವಾದದ್ದು ಹೇಗೆ? (ಜಾಗತಿಕ ಜಗಲಿ)

SCROLL FOR NEXT