ಸಿದ್ದರಾಮಯ್ಯ  
ರಾಜ್ಯ

ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ, ದುರಂತ: ಕರ್ನಾಟಕ ಸರ್ಕಾರದಿಂದ 5 ಕೋ.ರೂ ಪರಿಹಾರ

ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.

ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಮಳೆ, ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ದುರಂತಗಳಿಂದ ನೂರಾರು ಮಂದಿ ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ದುರಂತಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪತ್ತು ಪರಿಹಾರ ಮತ್ತು ಪುನರ್ವಸತಿಗೆ 5 ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದ್ದಾರೆ.

‘ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.

ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ.

ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಹಣವನ್ನು ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಳೆದ ಮಂಗಳವಾರ ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದರು. ಈ ವೇಳೆ 1,500 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karki

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

ಪುಣೆ: 'ಪರಿಕ್ಕರ್ ಯಾರು?' ಮಹಾರಾಷ್ಟ್ರ DCM ಅಜಿತ್ ಪವಾರ್ ಗೆ ಗೋವಾದ ಮಾಜಿ ಸಿಎಂ ಬಗ್ಗೆ ಗೊತ್ತಿಲ್ಲವೇ!

ಭಾರತ - ಪಾಕ್ ಕ್ರಿಕೆಟ್ ಪಂದ್ಯ: 26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವೇ? ಬಿಜೆಪಿ ವಿರುದ್ಧ ಓವೈಸಿ ಕಿಡಿ

'ನಾನು ಶಿವನ ಭಕ್ತ, ನಿಂದನೆಗಳ 'ವಿಷವನ್ನು ನುಂಗುತ್ತೇನೆ': ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

SCROLL FOR NEXT