ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಮುಸ್ಲಿಂ ಮಹಿಳೆಗೆ ಸೀಮಂತ ಶಾಸ್ತ್ರ ನೆರವೇರಿಸಿದ ಹಿಂದೂಗಳು!

ಸಂಘದ ಸಿಬ್ಬಂದಿ ನಗ್ಮಾ ಭಾನು ಅವರಿಗೆ ಹಿಂದೂ ಪದ್ಧತಿಗಳ ಪ್ರಕಾರ ಸೀಮಂತ ನೆರವೇರಿಸಿದ್ದು, ಇದು ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿದೆ.

ಮಂಡ್ಯ: ಇಲ್ಲಿನ ಕೃಷ್ಣರಾಜ ಪೇಟೆ ಪಟ್ಟಣದ ಹಿಂದೂ ಮಹಿಳೆಯರು ಗರ್ಭಿಣಿಯಾಗಿದ್ದ ಮುಸ್ಲಿಂ ಮಹಿಳೆಗೆ 'ಸೀಮಂತ' ಆಚರಣೆ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಮೆರೆದಿರುವ ಘಟನೆ ನಡೆದಿದೆ.

ಹೆರಿಗೆಗೆ ಕೆಲವು ದಿನಗಳು ಇರುವಾಗ ಗರ್ಭಿಣಿಯರಿಗೆ ಸಾಮಾನ್ಯವಾಗಿ ಸೀಮಂತ ಶಾಸ್ತ್ರವನ್ನು ಮಾಡಲಾಗುತ್ತದೆ. ಉತ್ತರ ಭಾರತದಲ್ಲಿ ಇದನ್ನು 'ಗೋಧ್ ಭರೈ' ಎಂದೂ ಕರೆಯುತ್ತಾರೆ. ಗರ್ಭಿಣಿ ಮತ್ತು ಹುಟ್ಟಲಿರುವ ಮಗುವನ್ನು ಆಶೀರ್ವದಿಸಲು ನಡೆಸಲಾಗುತ್ತದೆ.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಮತ್ತು ರಾಜ್ಯದ ಇತರ ಕೆಲವು ಭಾಗಗಳಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಗಳ ಸಂದರ್ಭದಲ್ಲಿ ನಡೆಯುತ್ತಿದ್ದ ಕೋಮು ಕಲಹದ ಮಧ್ಯೆ ಈ ಘಟನೆ ವರದಿಯಾಗಿದೆ.

ಶನಿವಾರ ಪಟ್ಟಣದ ಪದವೀಧರರ ಸಾಲ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಸೀಮಂತ ಸಮಾರಂಭವನ್ನು ಆಯೋಜಿಸಲಾಗಿತ್ತು.

ಸಂಘದ ಸಿಬ್ಬಂದಿ ನಗ್ಮಾ ಭಾನು ಅವರಿಗೆ ಹಿಂದೂ ಪದ್ಧತಿಗಳ ಪ್ರಕಾರ ಸೀಮಂತ ನೆರವೇರಿಸಿದ್ದು, ಇದು ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಧನ್ಕರ್ ವಿಚಾರವಾಗಿ ಎಚ್ಚೆತ್ತ NDA: ನೂತನ ಉಪರಾಷ್ಟ್ರಪತಿಗಳ ಕಾರ್ಯದರ್ಶಿಯಾಗಿ ಪ್ರಧಾನಿ ಮೋದಿ ಸಲಹೆಗಾರ ಅಮಿತ್ ಖರೆ ನೇಮಕ!

Cut Crude oil: ಟ್ರಂಪ್ ಒತ್ತಡದ ಬೆನ್ನಲ್ಲೇ ಕಚ್ಚಾ ತೈಲ, ಅನಿಲ ಆಮದು ಕಡಿತಕ್ಕೆ ಕೇಂದ್ರ ಮುಂದು; ಪ್ರಧಾನಿ ಮೋದಿ ಹೇಳಿದ್ದೇನು?

Asia Cup 2025: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ, ಟಾಸ್ ವೇಳೆ ನಾಯಕರ ಹಸ್ತಲಾಘವವಿಲ್ಲ!

ದಾವಣಗೆರೆ: ಹಿಂದೂ ದೇವರಿಗೆ ಅವಮಾನ ಮಾಡಿದವರ ಮನೆಗಳಿಗೆ ನುಗ್ಗಿ ಹೊಡಿತೀವಿ- ಪ್ರಮೋದ್ ಮುತಾಲಿಕ್

SCROLL FOR NEXT