ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ; 24 ಗಂಟೆಗಳಲ್ಲಿ ಒಂದೂವರೆ ತಿಂಗಳ ಮಗು ರಕ್ಷಣೆ

ಮಗುವಿನ ತಾಯಿ ಬೆಣಕಲ್ಲು ಗ್ರಾಮದ ಶ್ರೀದೇವಿ ಹೊಲಿಗೆಗಳನ್ನು ತೆಗೆಸಲು ಮತ್ತು ತಮ್ಮ ನವಜಾತ ಶಿಶುವಿನ ಜನನ ಪ್ರಮಾಣಪತ್ರವನ್ನು ಪಡೆಯಲು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಬಳ್ಳಾರಿ: ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯಾಚರಿಸುತ್ತಿದ್ದ ಮಕ್ಕಳ ಕಳ್ಳತನ ಮಾಡುವ ಗ್ಯಾಂಗ್ ಅನ್ನು ಪೊಲೀಸರು ಪತ್ತೆಹಚ್ಚಿದ್ದು, ಅಪಹರಣ ನಡೆದ 24 ಗಂಟೆಗಳಲ್ಲಿ ಒಂದೂವರೆ ತಿಂಗಳ ಮಗುವನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಮಾತನಾಡಿ, ಆರೋಪಿ ಶಮೀಮ್, ಆಕೆಯ ಪತಿ ಇಸ್ಮಾಯಿಲ್ ಮತ್ತು ಸಹಚರ ಬಾಷಾ ಶುಕ್ರವಾರ ಮಗುವನ್ನು ಅಪಹರಿಸಿ, ನಂತರ ತೋರಣಗಲ್ಲಿನ ಬಸವರಾಜ ಮಹಾಂತಪ್ಪ ಎಂಬುವವರಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

19 ವರ್ಷಗಳಿಂದ ಮಕ್ಕಳಿಲ್ಲದ ಬಸವರಾಜ, ಕಠಿಣ ನಿಯಮಗಳಿಂದಾಗಿ ಕಾನೂನುಬದ್ಧವಾಗಿ ದತ್ತು ಪಡೆಯಲು ವಿಫಲವಾದ ನಂತರ ಬಾಷಾ ಎಂಬಾತನನ್ನು ಸಂಪರ್ಕಿಸಿದ್ದನು ಎಂದು ಶೋಭಾ ರಾಣಿ ಹೇಳಿದರು.

ಪೊಲೀಸರ ಪ್ರಕಾರ, ಮಗುವಿನ ತಾಯಿ ಬೆಣಕಲ್ಲು ಗ್ರಾಮದ ಶ್ರೀದೇವಿ ಹೊಲಿಗೆಗಳನ್ನು ತೆಗೆಸಲು ಮತ್ತು ತಮ್ಮ ನವಜಾತ ಶಿಶುವಿನ ಜನನ ಪ್ರಮಾಣಪತ್ರವನ್ನು ಪಡೆಯಲು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಆದರೆ, ಪುರಸಭೆಯ ಕಚೇರಿಯಲ್ಲಿ ಜನನ ಪ್ರಮಾಣಪತ್ರ ನೀಡುವುದಾಗಿ ಶಮೀಮ್ ಹೇಳಿದ್ದಾರೆ. ಆಗ ಶ್ರೀದೇವಿ ಶೌಚಾಲಯಕ್ಕೆ ಹೋಗಲು ಮಗುವನ್ನು ಶಮೀಮ್ ಬಳಿಯಲ್ಲಿ ಕೊಟ್ಟಿದ್ದಾರೆ. ಈ ವೇಳೆ ಶಮೀಮ್ ಮಗುವಿನೊಂದಿಗೆ ಪರಾರಿಯಾಗಿದ್ದರು.

ಶ್ರೀದೇವಿ ತಕ್ಷಣವೇ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದಾರೆ.

ಪ್ರಕರಣಕ್ಕೆ ಆದ್ಯತೆ ನೀಡಲಾಗಿದ್ದು, ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಶನಿವಾರ ರಾತ್ರಿಯ ವೇಳೆಗೆ ಮಗುವನ್ನು ರಕ್ಷಿಸಿದ್ದಾರೆ. ಶಮೀಮ್‌ನ ತಾಯಿ ಜೈನಬಿ ಕೂಡ ಈ ಹಿಂದಿನ ಮಕ್ಕಳ ಕಳ್ಳತನ ಪ್ರಕರಣದಲ್ಲಿ ಅಪರಾಧಿಯಾಗಿದ್ದಾರೆ ಎಂದು ಎಸ್‌ಪಿ ಹೇಳಿದರು.

ಈ ಗ್ಯಾಂಗ್ ಎಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ