ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರೆಸ್ಟೀಜ್ ಜಿಂದಾಲ್ ಅಪಾರ್ಟ್‌ಮೆಂಟ್‌ನ 24ನೇ ಮಹಡಿಯಿಂದ ಹಾರಿ IAF ಎಂಜಿನಿಯರ್ ಆತ್ಮಹತ್ಯೆ

ಹಲಸೂರು ಮಿಲಿಟರಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನ 24 ನೇ ಮಹಡಿಯಿಂದ ಭಾರತೀಯ ವಾಯುಪಡೆಯ ಎಂಜಿನಿಯರ್ ಲೋಕೇಶ್ ಜಿಗಿದಿದ್ದಾರೆ.

ಬೆಂಗಳೂರು: ಭಾರತೀಯ ವಾಯುಪಡೆಯ ಎಂಜಿನಿಯರ್ ಒಬ್ಬರು ಭಾನುವಾರ ಸಂಜೆ ಅಪಾರ್ಟ್ ಮೆಂಟ್ ನ 24ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತನನ್ನು ಹಲಸೂರು ಮಿಲಿಟರಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನ 24 ನೇ ಮಹಡಿಯಿಂದ ಭಾರತೀಯ ವಾಯುಪಡೆಯ ಎಂಜಿನಿಯರ್ ಲೋಕೇಶ್ ಜಿಗಿದಿದ್ದಾರೆ.

ನಿನ್ನೆ ಸಂಜೆ ಲೋಕೇಶ್ ತಮ್ಮ ಸಹೋದರಿ ಲಕ್ಷ್ಮಿ ಅವರನ್ನು ಭೇಟಿ ಮಾಡಿದ್ದರು, ಯಾವುದೋ ವಿಷಯದಿಂದ ಅವರ ಮನಸ್ಥಿತಿ ಹಾಳಾಗಿತ್ತು ಆ ಕ್ಷಣದಲ್ಲಿ ಅವರು ಹಾರಿ ಆತ್ಮಹತ್ಯೆ ಮಾಡಿಕೊಂಡರು ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಕ್ರಮ ನಡೆದರೆ ಮಧ್ಯಪ್ರವೇಶಿಸುತ್ತೇವೆ- ಸುಪ್ರೀಂ ಕೋರ್ಟ್: ಬಿಹಾರ SIR ವಿರುದ್ಧದ ಅರ್ಜಿಗಳ ಅಂತಿಮ ವಿಚಾರಣೆ ಅಕ್ಟೋಬರ್ 7ಕ್ಕೆ ನಿಗದಿ

ಜಾರ್ಖಂಡ್‌: ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ ಮೂವರ ಹತ್ಯೆ!

ದೆಹಲಿ: ಬೈಕ್​ಗೆ BMW ಕಾರು ಡಿಕ್ಕಿ; ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಸಾವು, ಪತ್ನಿಗೆ ಗಾಯ

Waqf Amendment Act: ಕೆಲವೊಂದು ಅಂಶಗಳಿಗೆ ತಡೆ ನೀಡಿ ಸುಪ್ರೀಂ ಕೋರ್ಟ್ 'ಮಧ್ಯಂತರ ಆದೇಶ' ಪ್ರಕಟ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: PIL ವಜಾಗೊಳಿಸಿದ ಹೈಕೋರ್ಟ್; ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ!

SCROLL FOR NEXT