ಸರ್.ಎಂ ವಿಶ್ವೇಶ್ವರಯ್ಯ ದಿನಾಚರಣೆಯಲ್ಲಿ ಡಿಕೆ ಶಿವಕುಮಾರ್ 
ರಾಜ್ಯ

ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು, ಆದರೆ ನಾನು ಸರಿಯಾಗಿ ಓದಲಿಲ್ಲ: ಡಿ.ಕೆ ಶಿವಕುಮಾರ್

ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ.

ಬೆಂಗಳೂರು: ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ. ಈ ಹಿಂದೆ ನಗರಾಭಿವೃದ್ಧಿ ಹಾಗೂ ಇಂಧನ ಸಚಿವನಾಗಿದ್ದಾಗಲೂ ಕೆಲಸ ಮಾಡಿದ್ದೆ. ಇಂಜಿನಿಯರ್ ಗಳು ದೇಶ ನಿರ್ಮಿಸುವವರು” ಎಂದು ಹೇಳಿದರು.

“ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು. ಆದರೆ ನಾನು ಸರಿಯಾಗಿ ಓದಲಿಲ್ಲ. ನಮ್ಮ ತಂದೆ ಆಸೆ ಈಡೇರಿಸಬೇಕು ಎಂದು ಇಂಜಿನಿಯರಿಂಗ್ ಕಾಲೇಜು ಆರಂಭಿಸಿದೆ. ನಮ್ಮ ಮನೆಯಲ್ಲಿ ಇಬ್ಬರು ಮಕ್ಕಳು ಇಂಜಿನಿಯರ್. ಒಬ್ಬರು ಸಿವಿಲ್ ಇಂಜಿನಿಯರ್ ಮತ್ತೊಬ್ಬರು ಎಲೆಕ್ಟ್ರಿಕಲ್ ಇಂಜಿನಿಯರ್” ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel