ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್‌: ಆರು ವರ್ಷದ ಮಲ ಮಗಳನ್ನು ಕೊಂದ ಮಹಿಳೆಯ ಬಂಧನ

20 ವರ್ಷದ ಆರೋಪಿ ರಾಧಾ, ತನ್ನ ಮಲ ಮಗಳು ಶಾನ್ವಿಯನ್ನು ಉದ್ದೇಶಪೂರ್ವಕವಾಗಿ ಕಟ್ಟಡದ ಮೂರನೇ ಮಹಡಿಯ ಟೆರೇಸ್‌ನಿಂದ ತಳ್ಳಿ ಕೊಲೆ ಮಾಡಿದ್ದಾರೆ.

ಬೀದರ್: ತನ್ನ ಆರು ವರ್ಷದ ಮಲ ಮಗಳನ್ನು ತಾವು ವಾಸಿಸುತ್ತಿದ್ದ ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆಗಸ್ಟ್ 27 ರಂದು ನಗರದ ಆದರ್ಶ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

20 ವರ್ಷದ ಆರೋಪಿ ರಾಧಾ, ತನ್ನ ಮಲ ಮಗಳು ಶಾನ್ವಿಯನ್ನು ಉದ್ದೇಶಪೂರ್ವಕವಾಗಿ ಕಟ್ಟಡದ ಮೂರನೇ ಮಹಡಿಯ ಟೆರೇಸ್‌ನಿಂದ ತಳ್ಳಿ, ಆಕೆಯ ಸಾವು ಆಕಸ್ಮಿಕ ಎಂದು ಹೇಳಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಂದೆ ಸಿದ್ಧಾಂತ್, ತನ್ನ ಎರಡನೇ ಪತ್ನಿಯ ಹೇಳಿಕೆಯನ್ನು ನಂಬಿ ಆಗಸ್ಟ್ 28 ರಂದು ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ತನ್ನ ಮಗಳು ಕಟ್ಟಡದ ಮೂರನೇ ಮಹಡಿಯಿಂದ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಶನಿವಾರ ನೆರೆಹೊರೆಯವರು ತಮ್ಮ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಘಟನೆಯ ದೃಶ್ಯಗಳನ್ನು ನೋಡಿದ ನಂತರ ಬಾಲಕಿಯ ಮಲತಾಯಿ ರಾಧಾ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಪೊಲೀಸರ ಪ್ರಕಾರ, ರಾಧಾ ಬಾಲಕಿಯೊಂದಿಗೆ ತೆರೆದ ಟೆರೇಸ್‌ನಲ್ಲಿ ಅನುಮಾನಾಸ್ಪದವಾಗಿ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದ್ದು, ಉದ್ದೇಶಪೂರ್ವಕವಾಗಿ ಅವಳನ್ನು ತಳ್ಳಿರುವುದು ಕಂಡುಬಂದಿದೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಮತ್ತು ವಿವರವಾದ ತನಿಖೆಯ ನಂತರ, ಮೃತಳ ಅಜ್ಜಿಯ ದೂರಿನ ಮೇರೆಗೆ ಆರೋಪಿ ಮಹಿಳೆಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಸಂಬಂಧ ಆಕೆಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಬಾಲಕಿಯ ತಾಯಿ 2019 ರಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು. ನಂತರ ಕೆಲವು ವರ್ಷಗಳ ನಂತರ ಸಿದ್ಧಾಂತ್ ರಾಧಾಳನ್ನು ವಿವಾಹವಾದರು ಎಂದು ಪೊಲೀಸರು ಹೇಳಿದ್ದಾರೆ.

ಸಿದ್ಧಾಂತ್ ಮತ್ತು ರಾಧಾಗೆ ಅವಳಿ ಮಕ್ಕಳಿದ್ದಾರೆ. ಆದರೆ ವಿಚಾರಣೆಯ ಸಮಯದಲ್ಲಿ, ಆಸ್ತಿಯನ್ನು ತನ್ನ ಸ್ವಂತ ಮಕ್ಕಳಿಗೆ ಮಾತ್ರ ಹಂಚಬೇಕೆಂದು ಬಯಸಿದ್ದರಿಂದ ತನ್ನ ಮಲಮಗಳನ್ನು ಕೊಂದಿದ್ದೇನೆ ಎಂದು ಮಹಿಳೆ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT