ಸಂಗ್ರಹ ಚಿತ್ರ 
ರಾಜ್ಯ

ಗೌರವಧನ ನೀಡದ ಸರ್ಕಾರ: ಜಾತಿ ಗಣತಿ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರು ಬಹಿಷ್ಕಾರ

ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.

ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸಮೀಕ್ಷೆಯ ನಮೂನೆಯನ್ನು ವಿತರಿಸುವುದು ಸೇರಿ ಇತರೆ ಪೂರಕ ಕಾರ್ಯನಿರ್ವಹಿಸಬೇಕು. ಸಮೀಕ್ಷೆ ನಮೂನೆ ವಿತರಿಸುವ ಜೊತೆಗೆ ಸಮೀಕ್ಷೆಯಲ್ಲಿರುವ 60 ಪ್ರಶ್ನೆಗಳಿಗೆ ಮಾಹಿತಿ ನೀಡಲು ಮುಂಚಿತವಾಗಿ ತಯಾರಿರುವಂತೆ ನೋಡಿಕೊಳ್ಳಬೇಕು. ವಿವರಗಳನ್ನು ಮೊಬೈಲ್ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಸೇರಿ ಇನ್ನಿತರೆ ಕಾರ್ಯ ಮಾಡಬೇಕು.

ಇದಕ್ಕಾಗಿ 2000 ರೂ. ಗೌರವಧನ ನಿಗದಿಗೊಳಿಸಲಾಗಿದೆ. ಆದರೆ, ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣ ಇನ್ನೂ ಪಾವತಿಸಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಸಮೀಕ್ಷೆ ಕಾರ್ಯ ಹೆಚ್ಚುವರಿ ಕೆಲಸವಾಗಿರುವುದರಿಂದ ಹೆಚ್ಚಿನ ಗೌರವಧನ ನೀಡುವುದು ಸೇರಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು. ಇದಕ್ಕೆ ಸರ್ಕಾರ ಒಪ್ಪಿದಲ್ಲಿ ಮಾತ್ರ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗುವುದಾಗಿ ಆಶಾ ಕಾರ್ಯಕರ್ತೆಯರು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಸಮೀಕ್ಷೆಗೆ ಆಶಾ ಕಾರ್ಯಕರ್ತರಿಗೆ 1,000 ರೂ.ಗಳನ್ನು ನೀಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ, ಗೌರವ ಧನ ನೀಡಿಲ್ಲ. ಈ ಹಿಂದೆ ಮಾಡಿದ ಹಲವಾರು ಸಮೀಕ್ಷೆಗಳಿಗೆ ಹಣ ನೀಡಿಲ್ಲ. ಏಪ್ರಿಲ್ 1 ರಿಂದ 10,000 ರೂ.ಗಳ ಮಾಸಿಕ ಗೌರವಧನದ ಭರವಸೆ ನೀಡಿದ್ದರೂ, ಇಲ್ಲಿಯವರೆಗೆ ಯಾವುದೇ ಪಾವತಿ ಮಾಡಲಾಗಿಲ್ಲ. ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಮಧ್ಯಾಹ್ನದ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾತ್ರ 1,000 ರೂ. ವೇತನ ಹೆಚ್ಚಳದ ಭರವಸೆ ನೀಡಲಾಗಿದೆ. ಆದರೆ ಆಶಾ ಕಾರ್ಯಕರ್ತರನ್ನು ನಿರ್ಲಕ್ಷಿಸಲಾಗಿದೆ ಎಂದು ಸಂಘ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT