ತಾವರ್ ಚಂದ್ ಗೆಹ್ಲೋಟ್  
ರಾಜ್ಯ

ಬಫರ್‌ ಝೋನ್‌ ಕಡಿತ ಮಸೂದೆ ವಾಪಸ್‌: ಸರ್ಕಾರದಿಂದ ಸ್ಪಷ್ಟೀಕರಣ ಕೇಳಿದ ರಾಜ್ಯಪಾಲ ಗೆಹ್ಲೋಟ್

ಕೆರೆಗಳ ಬಫರ್ ಝೋನ್‌ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ.

ಬೆಂಗಳೂರು: ಕೆರೆಗಳ ಸಂರಕ್ಷಿತ ಪ್ರದೇಶವನ್ನು (ಬಫರ್‌ ಝೋನ್‌) ಕಡಿಮೆ ಮಾಡಲು ಅವಕಾಶ ಕಲ್ಪಿಸುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆಯನ್ನು ಸ್ಪಷ್ಟೀಕರಣ ಕೇಳಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ರಾಜ್ಯ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ಕೆರೆಗಳು ಮತ್ತು ರಾಜಕಾಲುವೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಸಂರಕ್ಷಿತ ಪ್ರದೇಶ ವನ್ನು ನಿಗದಿಪಡಿಸಲು ಹಾಗೂ ಬಫರ್‌ಝೋನ್‌ನಲ್ಲಿ ಸಾರ್ವಜನಿಕ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಮಸೂದೆ ತಿದ್ದುಪಡಿಗೆ ಸರ್ಕಾರ ಮುಂದಾಗಿತ್ತು. ಆದರೆ, ಸರ್ಕಾರದ ಈ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ನಾಗರಿಕರ ಸಂಘವಾದ ಬೆಂಗಳೂರು ಟೌನ್ ಹಾಲ್‌, ರಾಜ್ಯಪಾಲರಿಗೆ ಪತ್ರ ಬರೆದು ಮಸೂದೆಗೆ ಅಂಕಿತ ಹಾಕದಂತೆ ಮನವಿ ಮಾಡಿತ್ತು.

ಕೆರೆಗಳ ಬಫರ್ ಝೋನ್‌ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ. ಪರಿಸರ ಸಮತೋಲನ ಕಾಪಾಡಲು 30 ಮೀಟರ್‌ ಬದಲು 300 ಮೀಟರ್‌ಗೆ ಬಫರ್ ಝೋನ್‌ ಹೆಚ್ಚಿಸುವ ಅಗತ್ಯವಿದೆ ಎಂದು ಸಂಘವು ಪತ್ರದಲ್ಲಿ ಪ್ರತಿಪಾದಿಸಿತ್ತು.

ಬೆಂಗಳೂರು ಟೌನ್ ಹಾಲ್‌ ಸಂಘದ ಪತ್ರದಲ್ಲಿದ್ದ ಅಂಶಗಳನ್ನು ಉಲ್ಲೇಖಿಸಿ ಸ್ಪಷ್ಟೀಕರಣ ಕೇಳಿರುವ ರಾಜ್ಯಪಾಲರು, ಆ ಅಂಶಗಳಿಗೆ ವಿವರವಾದ ಸ್ಪಷ್ಟನೆಗಳ ಸಹಿತ ಕಡತವನ್ನು ಮತ್ತೊಮ್ಮೆ ಕಳುಹಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT