ಸಚಿವ ಮಧು ಬಂಗಾರಪ್ಪ 
ರಾಜ್ಯ

ಹೊಸದಾಗಿ 18,500 ಶಿಕ್ಷಕರ ಹುದ್ದೆ ನೇಮಕಾತಿಗೆ ಕ್ರಮ: ಮಧು ಬಂಗಾರಪ್ಪ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು.

ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು.

ಶಾಲಾ ಕೊಠಡಿಗಳ ಶಿಥಿಲಾವಸ್ಥೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಕೇವಲ ನಮ್ಮ ಸರಕಾರದ ಅವಧಿಯಲ್ಲಿ ಸೃಷ್ಟಿಯಾದ ಸಮಸ್ಯೆಯಲ್ಲ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಎಲ್ಲಾ ಶಾಲೆಗಳಲ್ಲೂ ಸಮಸ್ಯೆಗಳಿಲ್ಲ ಎಂದು ಹೇಳುತ್ತಿಲ್ಲ. ಈ ಹಿಂದಿನ ಸರಕಾರ ಯಾವುದೇ ಕೊಠಡಿಯನ್ನು ಕಟ್ಟಿಲ್ಲ. ನೇಮಕ ಕೂಡ ಮಾಡಿಲ್ಲ. ನಾವೂ ಅಧಿಕಾರಕ್ಕೆ ಬಂದ ಮೇಲೆ ವಿವೇಕ ಯೋಜನೆಯಡಿ 8,200 ಕೊಠಡಿ ಪೂರ್ಣ ಮಾಡಿದ್ದೇವೆ. ಮತ್ತೆ 3000 ಸಾವಿರ ಕೊಠಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಧಾರ್ಮಿಕ ಕ್ಷೇತ್ರದ ಬಗ್ಗೆ ಶಿಳ್ಳೆ ಹೊಡೆಯುವುದೇ ಸಿ ಟಿ ರವಿ ಅವರ ಅಭ್ಯಾಸವಾಗಿದೆ. ಇದು ಕೆಟ್ಟ ಗುಣ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ಮೈ-ಮನಗಳಲ್ಲಿ ಇದ್ದರೆ ಮಾತ್ರ ಇಂತಹ ವ್ಯವಸ್ಥೆ ಕಡಿಮೆಯಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!