ಸಂಗ್ರಹ ಚಿತ್ರ 
ರಾಜ್ಯ

ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಶಿಕ್ಷೆ: ಸಿಂಧಿ ಪ್ರೌಢಶಾಲೆ ವಿರುದ್ಧ ಕ್ರಮಕ್ಕೆ ಆಗ್ರಹ

ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದ್ದಕ್ಕೆ ದಂಡ ವಿಧಿಸಿರುವುದಾಗಿ ಶಾಲೆಯ ಪ್ರಾಂಶುಪಾಲರೆೇ ಒಪ್ಪಿಕೊಂಡಿರುವ ಬಗ್ಗೆ ದಾಖಲೆಗಳಿವೆ.

ಬೆಂಗಳೂರು: ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡವನ್ನು ವಿಧಿಸುತ್ತಿದೆ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು ಉತ್ತರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಅಧಿಕೃತ ವರದಿಗಳನ್ನು ಉಲ್ಲೇಖಿಸಿ ಕೆಡಿಎ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದ್ದಕ್ಕೆ ದಂಡ ವಿಧಿಸಿರುವುದಾಗಿ ಶಾಲೆಯ ಪ್ರಾಂಶುಪಾಲರೇ ಒಪ್ಪಿಕೊಂಡಿರುವ ಬಗ್ಗೆ ದಾಖಲೆಗಳಿವೆ ಎಂದು ತಿಳಿಸಿದ್ದಾರೆ.

ರಾಜಧಾನಿಯ ಪ್ರತಿಷ್ಠಿತ ಶಾಲೆಯೊಂದು ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುತ್ತಿರುವುದು ಸರಿಯಲ್ಲ. ಶಾಲೆಯೊಂದು ಕನ್ನಡದ ಕುರಿತು ಲಘು ಧೋರಣೆ ತಳೆದಿರುವುದು ನಕಾರಾತ್ಮಕ ಬೆಳವಣಿಗೆಯಾಗಿದೆ. ಇಂತಹ ಶಾಲೆಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ತನ್ನದೇ ನೆಲದಲ್ಲಿ ಕನ್ನಡ ಪರಕೀಯ ಸ್ಥಾನ ಹೊಂದುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಕನ್ನಡ ಪರ ನಿಲುವು ಸಾಬೀತು ಮಾಡಲು ಶಿಕ್ಷಣ ಸಚಿವರು ಮನಸ್ಸು ಮಾಡಬೇಕಿದೆ. ಈ ನೆಲದ ಭಾಷೆ ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆ ರದ್ದುಪಡಿಸಿ ಎನ್‌ಒಸಿ ಹಿಂಪಡೆಯಬೇಕು. ಶಿಕ್ಷಣ ಸಚಿವರ ಕ್ರಮ ಇಡೀ ರಾಜ್ಯವನ್ನು ತಲುಪಿದಲ್ಲಿ ಬೇರೆ ಶಿಕ್ಷಣ ಸಂಸ್ಥೆಗಳಿಗೂ ಪಾಠವಾಗಲಿದೆ. ಕನ್ನಡದ ಹಿತದೃಷ್ಟಿಯಿಂದ ಕಠಿಣ ಕ್ರಮ ಅನಿವಾರ್ಯ ಎಂದು ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಶಾಲೆ ಸ್ಪಷ್ಟನೆ

ನಮ್ಮ ಶಾಲೆಯು ಯಾವಾಗಲೂ ಕನ್ನಡವನ್ನು ಗೌರವಿಸುತ್ತದೆ ಮತ್ತು ಉತ್ತೇಜಿಸುತ್ತದೆ, ಭಾಷೆಯ ಬಗ್ಗೆ ಅತ್ಯಂತ ಗೌರವವನ್ನು ತೋರಿಸುತ್ತದೆ. 

ನಮ್ಮ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೆಚ್ಚುಗೆ, ಪರಸ್ಪರ ಗೌರವ ಮತ್ತು ಶಿಸ್ತನ್ನು ಬೆಳೆಸಲು ನಾವು ಬದ್ಧರಾಗಿದ್ದೇವೆ.

ನಮ್ಮ ಶಾಲೆಯಲ್ಲಿ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ತಪ್ಪಾಗಿ ವರದಿ ಮಾಡಲಾಗಿದೆ. 

ಇದು ಸಂಪೂರ್ಣವಾಗಿ ಸುಳ್ಳು ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ನಮ್ಮ ಸಂಸ್ಥೆಯಲ್ಲಿ ಕನ್ನಡ ಮಾತನಾಡಿದ ಯಾವುದೇ ವಿದ್ಯಾರ್ಥಿಗೆ ದಂಡ ವಿಧಿಸಿಲ್ಲ. 

ಮಾತನಾಡುವ ಭಾಷೆಯನ್ನು ಲೆಕ್ಕಿಸದೆ ನಿಂದನೀಯ ಅಥವಾ ಅಶ್ಲೀಲ ಭಾಷೆಯ ಬಳಕೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಮಾತ್ರ ಶಿಸ್ತಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶದಿಂದ ನವ ಮಂಗಳೂರು ಬಂದರಿಗೆ ಆಗಮಿಸಿದ ಎರಡು ತೈಲ ಹಡಗುಗಳು!

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

ಐಪಿಎಲ್ 2026: 5 ಎಸೆತದಲ್ಲಿ 5 ಸಿಕ್ಸರ್.. ಇಂಟರ್ನೆಟ್ ಗೆ ಬೆಂಕಿ ಹಚ್ಚಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್! Video

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

'ಇನ್ ಯಾವ್ friendship ಇಲ್ಲ': ಇರಾನ್ ಮಿಲಿಟರಿ ಅಧಿಕಾರಿಗಳು, ಸಿಬ್ಬಂದಿಗಳ ಹೊರದಬ್ಬಿದ Saudi Arabia

SCROLL FOR NEXT