ಅಮಾನತು (ಸಾಂಕೇತಿಕ ಚಿತ್ರ) 
ರಾಜ್ಯ

ಲಂಚ ಸ್ವೀಕರಿಸಿದ ಆರೋಪ: ಮೂವರು ವೈದ್ಯರು ಅಮಾನತು

ಲಂಚ ಪಡೆದ ಆರೋಪದ ಕುರಿತು ತನಿಖೆ ನಡೆಸಿದ್ದ ಸಿಬಿಐ, ಈ ಮೂವರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ.

ಬೆಂಗಳೂರು: ವೈದ್ಯಕೀಯ ಸಂಸ್ಥೆಗೆ ಅನುಕೂಲಕರ ವರದಿಗಳನ್ನು ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇಲೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಅಮಾನತುಗೊಂಡ ಮೂವರು ವೈದ್ಯರು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಎಂ.ಎಸ್‌. ಚೈತ್ರಾ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ.ಎನ್‌. ಮಂಜಪ್ಪ ಮತ್ತು ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ಶೆಲ್ಕೆ ಅಮಾನತುಗೊಂಡವರು.

‌ಲಂಚ ಪಡೆದ ಆರೋಪದ ಕುರಿತು ತನಿಖೆ ನಡೆಸಿದ್ದ ಸಿಬಿಐ, ಈ ಮೂವರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ. ಈ ಕುರಿತು ಇಲಾಖೆಗೆ ಸಿಬಿಐ ಇ-ಮೇಲ್‌ ಮೂಲಕ ಮಾಹಿತಿ ನೀಡಿದೆ. ಹೀಗಾಗಿ ಮೂವರನ್ನೂ ಕರ್ತವ್ಯದಿಂದ ಅಮಾನತುಗೊಳಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್‌ ಮೊಹಸಿನ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ@75: ದೇಶಾದ್ಯಂತ ಬಿಜೆಪಿಯಿಂದ ಅ.2ರವರೆಗೆ 'ಸೇವಾ ಪಾಕ್ಷಿಕ' ಅಭಿಯಾನ, ರಾಷ್ಟ್ರಪತಿ ಸೇರಿ ರಾಜಕೀಯ ಗಣ್ಯರಿಂದ ಪ್ರಧಾನಿಗೆ ಶುಭಾಶಯ

PM Modi 75th birthday: ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್: ಭಾರತ-ಯುಎಸ್ ಸಂಬಂಧ ವೃದ್ಧಿ ಬಗ್ಗೆ ಉಭಯ ನಾಯಕರು ಚರ್ಚೆ

ಡೆಹ್ರಾಡೂನ್ ನೆರೆಹೊರೆ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ: ಸಿದ್ದರಾಮಯ್ಯ ಪರ ಬೀದಿಗೆ ಇಳಿದರೆ ಕಾಗಿನೆಲೆ ಶ್ರೀಗಳ ತಲೆದಂಡ; ವಿಶ್ವನಾಥ್

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಅಧಿಕಾರಿಯ ಮನೆಯಲ್ಲಿ ದರೋಡೆ: ಇಬ್ಬರು ರೌಡಿಶೀಟರ್‌ ಸೇರಿ ಮೂವರ ಬಂಧನ

SCROLL FOR NEXT