ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರ: ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.

ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು.

ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಳೆಪಿಳ್ಳಾರಿ ಸಮೀಪದ ಜಮೀನಿನಿಂದ ಕಬ್ಬು ತುಂಬಿಸಿಕೊಂಡ ಲಾರಿ ಕಾರ್ಖಾನೆಗೆ ತೆರಳಲು ರಸ್ತೆಯ ಬಳಿ ನಿಂತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಗೂಡ್ಸ್ ಅಟೋ ಹಿಂಬದಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ತಾಯಿ ಬಗ್ಗೆ ಬಿಹಾರ ಕಾಂಗ್ರೆಸ್​​ ಪೋಸ್ಟ್​​; ವಿಡಿಯೋ ಡಿಲೀಟ್​​ ಮಾಡುವಂತೆ ಪಾಟ್ನಾ ಹೈಕೋರ್ಟ್ ಸೂಚನೆ

ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ.ಗಳ ಅನುದಾನ: ಪ್ರತ್ಯೇಕ ಸಚಿವಾಲಯಕ್ಕೆ ಶೀಘ್ರವೇ ಅಧಿಸೂಚನೆ; ಸಿಎಂ ಸಿದ್ದರಾಮಯ್ಯ

ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ

ಚಳಿಗಾಲ ಆರಂಭಕ್ಕೂ ಮುನ್ನ ವಾಯು ಮಾಲಿನ್ಯ ಯೋಜನೆ ರೂಪಿಸಿ: CAQM, CPCBಗೆ ಸುಪ್ರೀಂ ಗಡುವು

ದಕ್ಷಿಣ ಕೊರಿಯಾಗೆ ಭಾರತದ ನೂತನ ರಾಯಭಾರಿಯಾಗಿ ಗೌರಂಗಲಾಲ್ ದಾಸ್ ನೇಮಕ

SCROLL FOR NEXT