ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. 
ರಾಜ್ಯ

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ

ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ಬೆಂಗಳೂರು: ಬಿಡದಿ ಬಳಿ ಟೌನ್ ಶಿಪ್​​ಗೆ ಭೂ ಸ್ವಾಧೀನ ವಿರೋಧಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಆಹೋರಾತ್ರಿ ಧರಣಿ ನಡೆಸುತ್ತಿರುವ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು, ಮಂಗಳವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಅಶ್ವತ್ಥ್ ನಾರಾಯಣ್ ಅವರು ಮಾತನಾಡುತ್ತಿದ್ದಾಗ ನಾಗೇಶ್ ಎಂಬ ರೈತ ಕೀಟನಾಶಕ ಸೇವಿಸಲು ಪ್ರಯತ್ನಿಸಿದರು, ಇನ್ನೊಬ್ಬ ವ್ಯಕ್ತಿ ಕೂಡ ಅದೇ ರೀತಿ ಮಾಡಲು ಪ್ರಯತ್ನಿಸಿದರು. ಈ ವೇಳೆ ಇಬ್ಬರನ್ನೂ ಇತರ ರೈತರು ಮತ್ತು ಪೊಲೀಸರು ತಡೆದರು. ತಕ್ಷಣ ಪ್ರತಿಭಟನಾ ಸ್ಥಳದ ಬಳಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಇಬ್ಬರನ್ನೂ ಕರೆದೊಯ್ದರು.

ಭೂಸ್ವಾಧೀನ ಪ್ರಕ್ರಿಯೆ ಅಕ್ರಮ: ಆರ್.ಅಶೋಕ್

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಆರ್. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದು, ಇದರಲ್ಲಿ 6,500 ಎಕರೆ ಕೃಷಿ ಭೂಮಿಯಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ 10 ಲಕ್ಷಕ್ಕೂ ಹೆಚ್ಚು ತೆಂಗಿನ ಮರಗಳು ಮತ್ತು ಮಾವಿನ ಮರಗಳಿವೆ. ಪ್ರತಿದಿನ, ಈ ಪ್ರದೇಶದಿಂದ ಕೆಎಂಎಫ್‌ಗೆ 6 ಲಕ್ಷ ಲೀಟರ್ ಹಾಲು ಸರಬರಾಜು ಮಾಡಲಾಗುತ್ತದೆ. 3,000 ಕ್ಕೂ ಹೆಚ್ಚು ರೈತರು ಮತ್ತು ಕಾರ್ಮಿಕರು ಕೃಷಿಯನ್ನು ಅವಲಂಬಿಸಿದ್ದಾರೆ. ಇದರ ಹೊರತಾಗಿಯೂ, ಸರ್ಕಾರವು ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ನಿವೇಶನಗಳನ್ನು ಹಂಚಿಕೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ವಸತಿ ಮಂಡಳಿಯು ಈ ಹಿಂದೆ 560 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ನಿವೇಶನಗಳನ್ನು ಅಭಿವೃದ್ಧಿಪಡಿಸಿದೆ, ಆದರೆ, ಯಾವುದೇ ಮನೆಗಳನ್ನು ನಿರ್ಮಿಸಲಾಗಿಲ್ಲ. ಕೆಂಪೇಗೌಡ ಲೇಔಟ್ ಮತ್ತು ಶಿವರಾಮ ಕಾರಂತ್ ಲೇಔಟ್ ಇನ್ನೂ ಖಾಲಿಯಾಗಿಯೇ ಇವೆ. ಇಷ್ಟೊಂದು ಭೂಮಿ ಬಳಕೆಯಾಗದೆ ಉಳಿದಿರುವಾಗ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ರೈತರಿಗೆ ಮಾಡುತ್ತಿರುವ ದ್ರೋಹವಾಗಿದೆ. ಸರ್ಕಾರ ರಿಯಲ್ ಎಸ್ಟೇಟ್‌ನಿಂದ ಹಣ ಗಳಿಸಲು ಬಯಸುತ್ತಿದೆ. ಇದು ಕಾನೂನುಬಾಹಿರ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT