ಸಂಗ್ರಹ ಚಿತ್ರ 
ರಾಜ್ಯ

ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಬೆಂಗಳೂರು: ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಕೃಷ್ಣಾ ಲೇಔಟ್‌ನ 3 ನೇ ಕ್ರಾಸ್ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಘಟನೆ ವೇಳೆ ಮೊದಲ ಮಹಡಿಯಲ್ಲಿ ಮಲಗಿದ್ದ ಶೀಲಾ (44), ಗೋಪಿ (49), ಅಭಿಷೇಕ್ (18) ಮತ್ತು ರಮ್ಯಾ (28) ಎಂಬ ನಾಲ್ವರು ಗಾಯಗೊಂಡಿದ್ದಾರೆ.

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಕೂಡಲೇ ನೆರೆಹೊರೆಯವರು, ಗೋಪಿ ಕುಟುಂಬದವರಿಗೆ ಕರೆ ಮಾಡಿ ಎಚ್ಚರಿಸಿದ್ದಾರೆ. ಆದರೆ, ಕೆಳಮಹಡಿಯಲ್ಲಿ ಮನೆಯಲ್ಲಿದ್ದ ಗೋಪಿ ಕುಟುಂಬದವರು, ಹೊಗೆ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದು, ಹೊರ ಬರಲಾಗದೆ ಸಂಕಷ್ಟಕ್ಕೆ ತುತ್ತಾಗಿದ್ದರು. ಈ ಘಟನೆ ಬಗ್ಗೆ ಮಾಹಿತಿ ಪಡೆದ ಬೇಗೂರು ಠಾಣೆ ಹೊಯ್ಸಳ ವಾಹನದ ಪೊಲೀಸರು, ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ, ಸ್ಥಳೀಯರ ನೆರವಿನಿಂದ ಗೋಪಿ ಕುಟುಂಬವನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್.ಕೆ ಅಡ್ವಾಣಿ ಹೊಗಳಿದ ಶಶಿ ತರೂರ್; ಅಂತರ ಕಾಯ್ದುಕೊಂಡ ಕಾಂಗ್ರೆಸ್

Bihar Polls 2025: ಯಾರಿಗೆ ಬಿಹಾರ? ಮತ್ತೆ ಮಹಿಳಾ ಮತದಾರರು ನಿರ್ಧರಿಸಲಿದ್ದಾರೆಯೇ?

RSS ದೇಣಿಗೆ ಕುರಿತು ಮೋಹನ್ ಭಾಗವತ್ ಗೆ 11 ಪ್ರಶ್ನೆ ಕೇಳಿದ ಸಚಿವ ಪ್ರಿಯಾಂಕ್ ಖರ್ಗೆ

Ironman Challenge: ಅಣ್ಣಾಮಲೈ ಭಾಗಿ; ಸತತ 2ನೇ ಬಾರಿಗೆ ಸಂಸದ ಸೂರ್ಯ ಐರನ್‌ಮ್ಯಾನ್ ಸಾಧನೆ!

ಕೂಡ್ಲಿಗಿ: ಏಳನೇ 'ಗ್ಯಾರಂಟಿ'ಯಾಗಿ ಕೆರೆಗಳಿಗೆ ನೀರು! ಡಿಸಿಎಂ ಡಿ.ಕೆ ಶಿವಕುಮಾರ್

SCROLL FOR NEXT