ಸಂಗ್ರಹ ಚಿತ್ರ 
ರಾಜ್ಯ

ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಬೆಂಗಳೂರು: ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಕೃಷ್ಣಾ ಲೇಔಟ್‌ನ 3 ನೇ ಕ್ರಾಸ್ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಘಟನೆ ವೇಳೆ ಮೊದಲ ಮಹಡಿಯಲ್ಲಿ ಮಲಗಿದ್ದ ಶೀಲಾ (44), ಗೋಪಿ (49), ಅಭಿಷೇಕ್ (18) ಮತ್ತು ರಮ್ಯಾ (28) ಎಂಬ ನಾಲ್ವರು ಗಾಯಗೊಂಡಿದ್ದಾರೆ.

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಕೂಡಲೇ ನೆರೆಹೊರೆಯವರು, ಗೋಪಿ ಕುಟುಂಬದವರಿಗೆ ಕರೆ ಮಾಡಿ ಎಚ್ಚರಿಸಿದ್ದಾರೆ. ಆದರೆ, ಕೆಳಮಹಡಿಯಲ್ಲಿ ಮನೆಯಲ್ಲಿದ್ದ ಗೋಪಿ ಕುಟುಂಬದವರು, ಹೊಗೆ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದು, ಹೊರ ಬರಲಾಗದೆ ಸಂಕಷ್ಟಕ್ಕೆ ತುತ್ತಾಗಿದ್ದರು. ಈ ಘಟನೆ ಬಗ್ಗೆ ಮಾಹಿತಿ ಪಡೆದ ಬೇಗೂರು ಠಾಣೆ ಹೊಯ್ಸಳ ವಾಹನದ ಪೊಲೀಸರು, ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ, ಸ್ಥಳೀಯರ ನೆರವಿನಿಂದ ಗೋಪಿ ಕುಟುಂಬವನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ.ಗಳ ಅನುದಾನ: ಸಿಎಂ ಸಿದ್ದರಾಮಯ್ಯ ಪ್ರತಿಜ್ಞೆ

ಮೋದಿ@75: ದೇಶಾದ್ಯಂತ ಬಿಜೆಪಿಯಿಂದ ಅ.2ರವರೆಗೆ 'ಸೇವಾ ಪಾಕ್ಷಿಕ' ಅಭಿಯಾನ, ರಾಷ್ಟ್ರಪತಿ ಸೇರಿ ರಾಜಕೀಯ ಗಣ್ಯರಿಂದ ಪ್ರಧಾನಿಗೆ ಶುಭಾಶಯ

PM Modi 75th birthday: ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್: ಭಾರತ-ಯುಎಸ್ ಸಂಬಂಧ ವೃದ್ಧಿ ಬಗ್ಗೆ ಉಭಯ ನಾಯಕರು ಚರ್ಚೆ

ಡೆಹ್ರಾಡೂನ್ ನೆರೆಹೊರೆ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ: ಸಿದ್ದರಾಮಯ್ಯ ಪರ ಬೀದಿಗೆ ಇಳಿದರೆ ಕಾಗಿನೆಲೆ ಶ್ರೀಗಳ ತಲೆದಂಡ; ವಿಶ್ವನಾಥ್

SCROLL FOR NEXT