ಸಾಂದರ್ಭಿಕ ಚಿತ್ರ 
ರಾಜ್ಯ

ನವೆಂಬರ್ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚಿ: ಗುತ್ತಿಗೆದಾರರಿಗೆ DCM ಡಿಕೆಶಿ ಗಡುವು

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಗುಂಡಿಗಳಿಗೆ ಆದಷ್ಟು ಬೇಗ ಮುಕ್ತಿ ನೀಡಲಿದೆ ಎಂದು ಡಿಸಿಎಂ ಭರವಸೆ ನೀಡಿದ್ದಾರೆ.

ಬೆಂಗಳೂರು: ಸ್ವಚ್ಛ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ನವೆಂಬರ್ ಒಳಗೆ ನಗರದ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲು ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಗುಂಡಿಗಳಿಗೆ ಆದಷ್ಟು ಬೇಗ ಮುಕ್ತಿ ನೀಡಲಿದೆ ಎಂದು ಡಿಸಿಎಂ ಭರವಸೆ ನೀಡಿದ್ದಾರೆ.

"ಸಮಸ್ಯೆಯನ್ನು ಪರಿಹರಿಸಲು ನವೆಂಬರ್ ಒಳಗೆ ಗುಂಡಿಗಳನ್ನು ಮುಚ್ಚಲು ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಮತ್ತು ಸುಗಮ ಸಂಚಾರ ನಮ್ಮ ಗುರಿಯಾಗಿರುವುದರಿಂದ, ಜಿಬಿಎ ಸಾಧ್ಯವಾದಷ್ಟು ಬೇಗ ಗುಂಡಿಗಳ ಸಮಸ್ಯೆ ಪರಿಹರಿಸುತ್ತದೆ" ಎಂದು ಡಿಸಿಎಂ 'ಎಕ್ಸ್' ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು, ಸೆಪ್ಟೆಂಬರ್ 14 ರಂದು ನಗರವು ರಸ್ತೆ ಅಭಿವೃದ್ಧಿಯಲ್ಲಿ ಪ್ರಮುಖ ಪ್ರಗತಿಗೆ ಸಿದ್ಧವಾಗಿದೆ. ದುರಸ್ತಿ ಮತ್ತು ನಿರ್ಮಾಣಕ್ಕಾಗಿ ರೂ 1,100 ಕೋಟಿ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದರು.

ಏತನ್ಮಧ್ಯೆ, ಬೆಂಗಳೂರು ಕೇಂದ್ರ ನಗರ ನಿಗಮ ಆಯುಕ್ತ ರಾಜೇಂದ್ರ ಚೋಳನ್ ಬುಧವಾರ ಸಿ.ವಿ. ರಾಮನ್ ನಗರ ವಿಭಾಗದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರು ಹಾನಿಗೊಳಗಾದ ಪಾದಚಾರಿ ಮಾರ್ಗಗಳು, ಗುಂಡಿಗಳಿಂದ ಕೂಡಿದ ರಸ್ತೆಗಳು, ತ್ಯಾಜ್ಯ ಮತ್ತು ಪರಿಣಾಮಕಾರಿಯಲ್ಲದ ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಗುರುತಿಸಿದರು.

ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ವಿಫಲರಾದ ಎಂಜಿನಿಯರ್‌ಗಳು ಮತ್ತು ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ಚೋಳನ್ ಎಚ್ಚರಿಸಿದರು.

ಜೀವನ್ ಬಿಮಾ ನಗರ ಮುಖ್ಯ ರಸ್ತೆಯಲ್ಲಿ ತ್ಯಾಜ್ಯದಿಂದ ತುಂಬಿದ ಖಾಲಿ ಜಾಗದ ಭೂಮಾಲೀಕರಿಗೆ ನೋಟಿಸ್ ನೀಡಬೇಕೆಂದು ಆಯುಕ್ತರು ಸೂಚಿಸಿದ್ದಾರೆ.

ಇದಲ್ಲದೆ, ಪಾದಚಾರಿ ಮಾರ್ಗಗಳು ಮತ್ತು ರಸ್ತೆಗಳನ್ನು ಅತಿಕ್ರಮಿಸಿ ನಿರ್ಮಿಸಲಾದ ಅನಧಿಕೃತ ಶೆಡ್‌ಗಳನ್ನು ತಕ್ಷಣವೇ ತೆರವುಗೊಳಿಸಲು ಮತ್ತು ಅತಿಕ್ರಮಣದಾರರಿಗೆ ದಂಡ ವಿಧಿಸಲು ಅವರು ಆದೇಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT