ಪ್ರಿಯಾಂಕ್ ಖರ್ಗೆ 
ರಾಜ್ಯ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಂಪುಟದಲ್ಲಿ ಮಹತ್ವದ ತೀರ್ಮಾನ; ಪ್ರಿಯಾಂಕ್ ಖರ್ಗೆ ಕೃತಜ್ಞತೆ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಬೇಕು ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ರಾಜಕಾರಣಿಗಳು ಹಾಗೂ ಸ್ಥಳೀಯ ಹೋರಾಟಗಾರರು ಬೇಡಿಕೆ ಇಟ್ಟಿದ್ದರು. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ಪ್ರತ್ಯೇಕ ಕಲ್ಯಾಣ ಕರ್ನಾಟಕ ಸಚಿವಾಲಯ ಸ್ಥಾಪನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ಈ ಕುರಿತಾಗಿ ವಿವರವನ್ನು ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಬೇಕು ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ರಾಜಕಾರಣಿಗಳು ಹಾಗೂ ಸ್ಥಳೀಯ ಹೋರಾಟಗಾರರು ಬೇಡಿಕೆ ಇಟ್ಟಿದ್ದರು. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಆರಂಭಿಸುವ ನಿಟ್ಟಿನಲ್ಲಿ ಸಂಪುಟ ತೀರ್ಮಾನ ಕೈಗೊಂಡಿದೆ. ಆದರೆ ಮುಖ್ಯ ಕಚೇರಿ ಎಲ್ಲಿ ಇರಬೇಕು ಎಂಬ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮಾಹಿತಿ ನೀಡಿದರು.

ರಾಜ್ಯದ ಇತರ ಭಾಗಗಳಿಗೆ ಹೋಲಿಕೆ ಮಾಡಿದರೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಈ ಭಾಗದಲ್ಲಿ ಅಭಿವೃದ್ಧಿ ಯೋಜನೆಗಳಿಗಾಗಿ ಪ್ರತ್ಯೇಕ ಸಚಿವಾಲಯ ಬೇಕು ಎಂಬ ಅಗ್ರಹ ಹಲವು ವರ್ಷಗಳಿಂದ ಕೇಳಿ ಬಂದಿತ್ತು. ಕೊನೆಗೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನೂ ಈ ಸಂಬಂಧ ತಮ್ಮ "ಎಕ್ಸ್" ಖಾತೆಯಲ್ಲಿ ಬರೆದುಕೊಂಡಿರುವ ಅವರು, ಹೊಸ ಸಚಿವಾಲಯದಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಗತಿ ಪಡೆಯಲಿದೆ ಎಂದು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸಿ ಬಲಪಡಿಸುವ ನಿರ್ಧಾರವನ್ನೂ ಸಚಿವ ಸಂಪುಟ ಕೈಗೊಂಡಿದೆ. ಹೊಸ ಸಚಿವಾಲಯ ಸೃಷ್ಟಿಗೆ ಕಾರಣರಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಿಯಾಂಕ್ ಖರ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

1948 ರಲ್ಲಿ ನಿಜಾಮನ ಆಳ್ವಿಕೆಯಿಂದ ಈ ಪ್ರದೇಶವು ವಿಮೋಚನೆಗೊಂಡ ನೆನಪಿಗಾಗಿ ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಮುನ್ನಾದಿನದಂದು ಈ ಘೋಷಣೆ ಹೊರಬಿದ್ದಿದೆ. ಈ ಸಂದರ್ಭದ ಸ್ಮರಣಾರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕಲಬುರಗಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನು ಒಳಗೊಂಡಿರುವ ಕಲ್ಯಾಣ ಕರ್ನಾಟಕ ಪ್ರದೇಶವು ರಾಜ್ಯದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ ಮತ್ತು ಸಂವಿಧಾನದ 371(ಜೆ) ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟನ್ ರೈಲಿನಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಇರಿತ: 9 ಜನರ ಸ್ಥಿತಿ ಗಂಭೀರ, ಇಬ್ಬರು ಶಂಕಿತರ ಬಂಧನ

ಭಾರೀ ಮಳೆಯಿಂದಾಗಿ ಟಾಸ್ ರದ್ದಾದ ಕಾರಣ ಭಾರತ-ಆಫ್ರಿಕಾ ಫೈನಲ್ ವಿಳಂಬ: ಇಂದು ಯಾರೇ ಗೆದ್ದರೂ ಇತಿಹಾಸ ಸೃಷ್ಟಿ!

3ನೇ ಟಿ20: ಭಾರತಕ್ಕೆ ಗೆಲ್ಲಲು 187 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

Cricket: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಶ್ವದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಆಜಂ!

INDIA vs AUSTRALIA, 3rd T20I: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಸಂಜು ಸ್ಯಾಮ್ಸನ್ ಸೇರಿ ಮೂವರಿಗೆ ಕೊಕ್

SCROLL FOR NEXT