ಸಂಗ್ರಹ ಚಿತ್ರ 
ರಾಜ್ಯ

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಅಧಿಕಾರಿಯ ಮನೆಯಲ್ಲಿ ದರೋಡೆ: ಇಬ್ಬರು ರೌಡಿಶೀಟರ್‌ ಸೇರಿ ಮೂವರ ಬಂಧನ

ನ್ಯಾಯಾಂಗ ಬಂಧನದಲ್ಲಿದ್ದ ಅಭಿ ಮತ್ತು ಧನುಷ್ ಜಾಮೀನು ಪಡೆಯಲು ಸಾಲ ಪಡೆದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ತೆಗೆದುಕೊಂಡ ಸಾಲ ಮರುಪಾವತಿಸಲು ಸರ್ಕಾರಿ ಅಧಿಕಾರಿಯ ಮನೆಯಲ್ಲಿ ದರೋಡೆ ಮಾಡಿದ್ದಕ್ಕಾಗಿ ಇಬ್ಬರು ರೌಡಿಶೀಟರ್‌ಗಳು ಸೇರಿದಂತೆ ಮೂವರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತನ್ನು ಅಬ್ರಹಾಂ ಅಲಿಯಾಸ್ ಅಭಿ (24), ಧನುಷ್ ಅಲಿಯಾಸ್ ದಡಿಯಾ (25), ಎಂ ಕೆ ನಿಖಿಲ್ (25) ಎಂದು ಗುರ್ತಿಸಲಾಗಿದೆ.

ಧನುಷ್ ಹಾಗೂ ಅಬ್ರಹಾಂ ಇಬ್ಬರೂ ರೌಡಿಶೀಟರ್ ಗಳಾಗಿದ್ದು, ನಿಖಿಲ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ನಾಲ್ಕು ಪ್ರಕರಣಗಳಿರುವುದಾಗಿ ತಿಳಿದುಬಂದಿದೆ.

ಕೊಲೆ ಪ್ರಕರಣದಲ್ಲಿ ಧನುಷ್ ಹಾಗೂ ಅಬ್ರಹಾಂ ಜೈಲು ಸೇರಿದ್ದರು, ಸಾಲ ಪಡೆದು ಜಾಮೀನಿನ ಮೇಲೆ ಹೊರ ಬಂದಿದ್ದರು. ಸಾಲ ಮರುಪಾವತಿಗಾಗಿ ಇಬ್ಬರೂ ಸರ್ಕಾರಿ ಅಧಿಕಾರಿಯ ಮನೆಯೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಬೆಳ್ಳಿ ವಸ್ತುಗಳು, ನಗದು ಮತ್ತು ಕೈಗಡಿಯಾರಗಳನ್ನು ಕದ್ದಿದ್ದಾರೆ.

ಧಾರ್ಮಿಕ ಕಾರ್ಯಕ್ರಮಕ್ಕಾಗಿ ಅಧಿಕಾರಿ ಊರಿಗೆ ತೆರಳಿದ್ದಾಗ ದರೋಡೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಪೊಲೀಸರು 50 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಪರಿಶೀಲಿಸಿದ ನಂತರ ಆಕತರೋಪಿಗಳನ್ನು ಬಂಧಿಸಿದ್ದಾರೆ.

ನ್ಯಾಯಾಂಗ ಬಂಧನದಲ್ಲಿದ್ದ ಅಭಿ ಮತ್ತು ಧನುಷ್ ಜಾಮೀನು ಪಡೆಯಲು ಸಾಲ ಪಡೆದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಸಾಲವನ್ನು ಮರುಪಾವತಿಸಲು, ಇಬ್ಬರು ನಿಖಿಲ್ ಜೊತೆಗೆ ಕಳ್ಳತನಕ್ಕೆ ಯೋಜನೆ ರೂಪಿಸಿದ್ದಾರೆ. ಕದ್ದ ಕೆಲವು ಚಿನ್ನದ ಆಭರಣಗಳನ್ನು ಮಾರಾಟ ಮಾಡಿದ ನಂತರ, ಆರೋಪಿಗಳು ಗೋವಾ ಮತ್ತು ಕೇರಳಕ್ಕೆ ಪರಾರಿಯಾಗಿದ್ದರು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳದಂತೆ ಪ್ರತಿದಿನ ಹೊಸ ಇನ್‌ಸ್ಟಾಗ್ರಾಮ್ ಖಾತೆಗಳನ್ನು ರಚಿಸಿ, ಫೋನ್ ಕರೆಗಳ ಬದಲಿಗೆ ಆಡಿಯೋ ಮತ್ತು ವಿಡಿಯೋ ಕರೆಗಳ ಮೂಲಕ ಆಪ್ತರೊಂದಿಗೆ ಮಾತುಕತೆ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ ಪೊಲೀಸರು 423 ಗ್ರಾಂ ಚಿನ್ನಾಭರಣಗಳು, 710 ಗ್ರಾಂ ಬೆಳ್ಳಿ ವಸ್ತುಗಳು ಮತ್ತು 4,000 ರೂ. ನಗದು ವಶಪಡಿಸಿಕೊಂಡಿದ್ದು, ಒಟ್ಟು 50 ಲಕ್ಷ ರೂ. ಮೌಲ್ಯದ ಹಣ ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಮೆರಿಕ ಅಡಿಯಲ್ಲೇ ವೆನೆಜುವೆಲಾ ಇರಲಿದೆ... ಯಾರ ಸುಪರ್ದಿಗೂ ನೀಡಲ್ಲ': Nicolas Maduro ಬಂಧನ ಬಳಿಕ ಡೊನಾಲ್ಡ್ ಟ್ರಂಪ್ ಮಾತು!

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

Ranjitha Murder: ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ! ಮುತಾಲಿಕ್ ಆಕ್ರೋಶ, ಯಲ್ಲಾಪುರ ಬಂದ್ ಕರೆ!

ಬಳ್ಳಾರಿ ಫೈರಿಂಗ್, ಘರ್ಷಣೆ: 'ಸಾವನ್ನಪ್ಪಿದ ವ್ಯಕ್ತಿಗೆ ತಗುಲಿದ ಗುಂಡು ಪೊಲೀಸರ ಬಂದೂಕಿನದ್ದಲ್ಲ..' ಎಸ್‌ಪಿ ವರ್ಗಾವಣೆಗೆ ಕಾರಣ ಕೊಟ್ಟ G Parameshwara

ತಲೆ ಮೇಲೆ ಹೈ ಟೆನ್ಷನ್ ವೈರ್: ಕೂದಲೆಳೆ ಅಂತರದಲ್ಲಿ ಆಂಧ್ರ ಡಿಸಿಎಂ ಪಾರು, ಪುನರ್ಜನ್ಮ ಎಂದ Pawan Kalyan, Video Viral

SCROLL FOR NEXT