ಡಾ.ಸುಧಾಕರ್ 
ರಾಜ್ಯ

ಚುನಾವಣೆ ವೇಳೆ 4.8 ಕೋಟಿ ರೂ ಜಪ್ತಿ ಪ್ರಕರಣ: ಸಂಸದ ಡಾ. ಕೆ.ಸುಧಾಕರ್‌ ವಿರುದ್ಧದ ಪ್ರಕರಣ ರದ್ದು

ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿ ಗೋವಿಂದಪ್ಪನವರ ಮನೆಯಲ್ಲಿ ಪತ್ತೆಯಾದ 4.8 ಕೋಟಿ ರೂ.ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ಕೆ ಸುಧಾಕರ್ ವಿರುದ್ಧ ಕೇಸ್ ದಾಖಲಿಸಿತ್ತು.

ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ 4.8 ಕೋಟಿ ರೂಪಾಯಿ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿ ಗೋವಿಂದಪ್ಪನವರ ಮನೆಯಲ್ಲಿ ಪತ್ತೆಯಾದ 4.8 ಕೋಟಿ ರೂ.ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ಕೆ ಸುಧಾಕರ್ ವಿರುದ್ಧ ಕೇಸ್ ದಾಖಲಿಸಿತ್ತು.

ಗೋವಿಂದಪ್ಪ ಎಂಬುವವರ ನಿವಾಸದಲ್ಲಿ ನಗದು ವಶಪಡಿಸಿಕೊಂಡ ನಂತರ ಸುಧಾಕರ್ ಅವರು ಎಪ್ರಿಲ್ 25 ರಂದು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಾಪ್ ಕರೆ ಮಾಡಿ, ಸಹಾಯಕ್ಕಾಗಿ ಮನವಿ ಮಾಡಿದ್ದಾರೆ ಮತ್ತು ಸಂದೇಶ ಕುಳುಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ನಡುವೆ ತಮ್ಮ ವಿರುದ್ಧದ ವಿಚಾರಣೆ ರದ್ದು ಕೋರಿ ಸುಧಾಕರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರ ಪೀಠ, ಪ್ರಕರಣ ರದ್ದುಪಡಿಸುವಂತೆ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT