ಡಾ.ಸುಧಾಕರ್ 
ರಾಜ್ಯ

ಚುನಾವಣೆ ವೇಳೆ 4.8 ಕೋಟಿ ರೂ. ಜಪ್ತಿ ಪ್ರಕರಣ: ಸಂಸದ ಡಾ.ಕೆ.ಸುಧಾಕರ್‌ ವಿರುದ್ಧದ ಪ್ರಕರಣ ರದ್ದು

ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿ ಗೋವಿಂದಪ್ಪನವರ ಮನೆಯಲ್ಲಿ ಪತ್ತೆಯಾದ 4.8 ಕೋಟಿ ರೂ.ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ಕೆ ಸುಧಾಕರ್ ವಿರುದ್ಧ ಕೇಸ್ ದಾಖಲಿಸಿತ್ತು.

ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ 4.8 ಕೋಟಿ ರೂಪಾಯಿ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿ ಗೋವಿಂದಪ್ಪನವರ ಮನೆಯಲ್ಲಿ ಪತ್ತೆಯಾದ 4.8 ಕೋಟಿ ರೂ.ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ಕೆ ಸುಧಾಕರ್ ವಿರುದ್ಧ ಕೇಸ್ ದಾಖಲಿಸಿತ್ತು.

ಗೋವಿಂದಪ್ಪ ಎಂಬುವವರ ನಿವಾಸದಲ್ಲಿ ನಗದು ವಶಪಡಿಸಿಕೊಂಡ ನಂತರ ಸುಧಾಕರ್ ಅವರು ಎಪ್ರಿಲ್ 25 ರಂದು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಾಪ್ ಕರೆ ಮಾಡಿ, ಸಹಾಯಕ್ಕಾಗಿ ಮನವಿ ಮಾಡಿದ್ದಾರೆ ಮತ್ತು ಸಂದೇಶ ಕುಳುಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ನಡುವೆ ತಮ್ಮ ವಿರುದ್ಧದ ವಿಚಾರಣೆ ರದ್ದು ಕೋರಿ ಸುಧಾಕರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರ ಪೀಠ, ಪ್ರಕರಣ ರದ್ದುಪಡಿಸುವಂತೆ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉತ್ತರಾಖಂಡ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಹತ್ತು ಮಂದಿ ನಾಪತ್ತೆ, ಸಂಪರ್ಕ ಕಳೆದುಕೊಂಡ ಗ್ರಾಮಗಳು

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ

MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ

ಹಣಕಾಸು ಸ್ವಾತಂತ್ರ್ಯಕ್ಕೆ 7 ಸರಳ ನಿಯಮಗಳು! (ಹಣಕ್ಲಾಸು)

ಸಿಂಹ ಅಲ್ಲ 'ನಾಯಿ' ಎಂದು ಹೆಸರಿಡಬೇಕಿತ್ತು: ಕಚ್ಚೆ ಹರುಕನಿಗೆ ಟಿಕೆಟ್ ಕೊಡದೆ ಬಿಜೆಪಿಯವರೇ ಕ್ಯಾಕರಿಸಿ ಉಗಿದು ಮನೆಯಲ್ಲಿ ಕೂರಿಸಿದ್ದಾರೆ!

SCROLL FOR NEXT