ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿ ( ಸಂಗ್ರಹ ಚಿತ್ರ ) 
ರಾಜ್ಯ

ಆಸ್ಪತ್ರೆ ಬಿಲ್ ಪಾವತಿಸಲು ಸರ್ಕಾರ ನಿರ್ಲಕ್ಷ್ಯ: ಮೊಸಳೆಹೊಸಹಳ್ಳಿ ಅಪಘಾತದಲ್ಲಿ ಗಾಯಗೊಂಡ ಸಂಬಂಧಿಕರ ಆಕ್ರೋಶ

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮತ್ತು ಹಾಸನ ಸಂಸದ ಶ್ರೇಯಸ್ ಪಟೇಲ್ ಅವರು ಸಂತ್ರಸ್ತರನ್ನು ಭೇಟಿ ಮಾಡಿ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಭರವಸೆ ನೀಡಿದ್ದರು.

ಹಾಸನ: ಮೊಸಳೆಹೊಸಹಳ್ಳಿ ಗಣೇಶ ವಿಸರ್ಜನೆ ಮರವಣಿಗೆಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಟ್ರಕ್ ಹರಿದು 10 ಜನರು ಸಾವನ್ನಪ್ಪಿ, 21 ಜನರು ಗಾಯಗೊಂಡ ಪ್ರಕರಣ ಸಂಬಂಧ ಸರ್ಕಾರ ನೀಡಿದ ಭರವಸೆ ಈಡೇರಿಲ್ಲ, ಹೀಗಾಗಿ ಅಪಘಾತದಲ್ಲಿ ಗಾಯಗೊಂಡವರ ಸಂಬಂಧಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮತ್ತು ಹಾಸನ ಸಂಸದ ಶ್ರೇಯಸ್ ಪಟೇಲ್ ಅವರು ಸಂತ್ರಸ್ತರನ್ನು ಭೇಟಿ ಮಾಡಿ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಭರವಸೆ ನೀಡಿದ್ದರು.

ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿಯೂ ಹೇಳಿದ್ದರು. ಆದರೆ ಅಂದಿನಿಂದ, ರಾಜಕೀಯ ನಾಯಕರು ಅಥವಾ ಹಿರಿಯ ಅಧಿಕಾರಿಗಳು ಅನೇಕ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ.

ಗಾಯಾಳುಗಳಲ್ಲಿ ಮೊಸಳೆಹೊಸಹಳ್ಳಿಯ ಎಂಜಿನಿಯರಿಂಗ್ ವಿದ್ಯಾರ್ಥಿ ಹೃತ್ವಿಕ್ ಮತ್ತು ಮೊಸಳೆಹೊಸಹಳ್ಳಿಯ ಸರ್ಕಾರಿ ಡಿಪ್ಲೊಮಾ ಕಾಲೇಜಿನ ಗ್ರೂಪ್ ಡಿ ಉದ್ಯೋಗಿ ಆದರ್ಶ್ ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ವಿದ್ಯಾರ್ಥಿ ಆಕಾಶ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಹಣ ನೀಡುವಂತೆ ಒತ್ತಡ ಹೇರುತ್ತಿರುವುದರಿಂದ ಸಂತ್ರಸ್ತರ ಕುಟುಂಬಗಳು ಈಗ ಅಸಮಾಧಾನಗೊಂಡಿವೆ.

ಭರವಸೆ ನೀಡಿದ ಪರಿಹಾರವನ್ನು ಬಿಡುಗಡೆ ಮಾಡದಿದ್ದಕ್ಕಾಗಿ ಜೆಡಿಎಸ್ ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.

ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಲು ಜಿಲ್ಲಾ ಸಚಿವರು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ನಾಯಕ ನಾಗರಾಜ್ ಒತ್ತಾಯಿಸಿದ್ದಾರೆ. ಸರ್ಕಾರವು ಆಸ್ಪತ್ರೆಯ ಶುಲ್ಕವನ್ನು ಮುಂದಿನ ದಿನಗಳಲ್ಲಿ ಮರುಪಾವತಿಸಲಿದೆ ಎಂದು ನಂತರ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?