ನೇತ್ರಾವತಿ ನದಿ ಬಳಿ ಜಮಾಯಿಸಿರುವ ಜನರು (ಪ್ರಾತಿನಿಧಿಕ ಚಿತ್ರ) 
ರಾಜ್ಯ

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಜರು, ಹೇಳಿಕೆ ದಾಖಲು

ಈಮಧ್ಯೆ, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು ಶುಕ್ರವಾರ ಹೇಳಿಕೆ ದಾಖಲಿಸಿದ್ದಾರೆ.

ದೇವಾಲಯ ಆಡಳಿತವನ್ನು ಬೆಂಬಲಿಸಿ ಹಲವಾರು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಧರ್ಮಸ್ಥಳ ಗ್ರಾಮದಲ್ಲಿನ ಸಾಮೂಹಿಕ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಆರೋಪಿಸಿದ್ದಕ್ಕಾಗಿ ಎಸ್‌ಐಟಿ ಅವರಿಗೆ ನೋಟಿಸ್ ನೀಡಿತ್ತು.

ಈಮಧ್ಯೆ, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26 ರಂದು, ನ್ಯಾಯಾಲಯದ ವಾರಂಟ್ ಪಡೆದು ಎಸ್‌ಐಟಿ ಅಧಿಕಾರಿಗಳು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಶೋಧ ನಡೆಸಿದ್ದರು. ಈ ಕಾರ್ಯಾಚರಣೆಯ ವೇಳೆ, ಶಸ್ತ್ರಾಸ್ತ್ರಗಳು ಮತ್ತು ಬಂದೂಕನ್ನು ವಶಪಡಿಸಿಕೊಳ್ಳಲಾಯಿತು. ತಿಮರೋಡಿ ಅವರು ಅವುಗಳನ್ನು ಅಕ್ರಮವಾಗಿ ಹೊಂದಿದ್ದರು ಎಂದು ಆರೋಪಿಸಲಾಗಿದೆ. ನಂತರ, ಎಸ್‌ಐಟಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಶುಕ್ರವಾರ ಅಧಿಕಾರಿಗಳು ಅವರ ಮನೆಗೆ ಹೋದಾಗ, ಅವರು ಇರಲಿಲ್ಲ. ಹೀಗಾಗಿ, ಅವರ ಮನೆಯ ಮುಂದೆ ನೋಟಿಸ್ ಅಂಟಿಸಲಾಗಿದೆ.

ಈ ಮಧ್ಯೆ, ಧರ್ಮಸ್ಥಳ ಗ್ರಾಮದ ಸಿಕೆ ಚಂದ್ರ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು ನೀಡಿದ್ದಾರೆ. ಕುಸುಮಾ ಅವರು ತಮ್ಮ ಪತಿಯನ್ನು 'ಸ್ಲೋ ಪಾಯ್ಸನ್'ನಿಂದ ಕೊಲ್ಲಲಾಗಿದೆ ಎಂದು ಕೆಲವು ಯೂಟ್ಯೂಬ್ ಚಾನೆಲ್‌ಗಳಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

'ತಮ್ಮ ಮಗಳ ಸಾವಿನಲ್ಲಿ ಹೆಸರಿಸಿದ್ದ ವ್ಯಕ್ತಿಗಳನ್ನು ಮತ್ತು ಧರ್ಮಸ್ಥಳದ ಇತರರನ್ನು ಆಧಾರರಹಿತ ಹೇಳಿಕೆಗಳೊಂದಿಗೆ ಪರೋಕ್ಷವಾಗಿ ಜೋಡಿಸಲು ಪ್ರಯತ್ನಿಸಿದರು' ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT