ಜಕ್ಕೂರು ಏರೋಡ್ರೋಮ್​ನಲ್ಲಿ ತಮ್ಮ ಹೊಸ ಹೆಲಿಕಾಪ್ಟರ್ ಅನ್ನು ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು.  
ರಾಜ್ಯ

ಹೊಸ ಹೆಲಿಕಾಪ್ಟರ್​ ಖರೀದಿಸಿದ ಸತೀಶ್ ಜಾರಕಿಹೊಳಿ! ಬೆಲೆ ಎಷ್ಟು ಗೊತ್ತಾ?

ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಅನ್ನು ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯ ಆತ್ಯಾಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಅನ್ನು ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯ ಆತ್ಯಾಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ.

ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್​ನಲ್ಲಿ ತಮ್ಮ ಹೊಸ ಹೆಲಿಕಾಪ್ಟರ್ ಅನ್ನು ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು. ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆಗೆ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ವಿಶೇಷ ಹೆಲಿಕಾಪ್ಟರ್

ಈ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಧುನಿಕ ಸುರಕ್ಷಾ ವ್ಯವಸ್ಥೆಯನ್ನು ಹೊಂದಿದ್ದು, ಐವರು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳು ಪ್ರಯಾಣಿಸಬಹುದಾಗಿದೆ. ಚಾಪರ್ ಸೀಟ್ ಸೌಲಭ್ಯವಿರುವ ಈ ಹೆಲಿಕಾಪ್ಟರ್ ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುತ್ತದೆ. ಇದರ ಜೊತೆಗೆ, ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನೂ ಹೊಂದಿದೆ.

ಸತೀಶ್ ಜಾರಕಿಹೊಳಿ ಅವರು ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ, ಫೋಟೋ ಮತ್ತು ವಿಡಿಯೋ ಹಂಚಿಕೊಂಡಿದ್ದು, “ಶೀಘ್ರವೇ ನಮ್ಮ ಹೊಸ ಹೆಲಿಕಾಪ್ಟರ್ ಹಾರಾಟಕ್ಕೆ ಸಿದ್ಧವಾಗಲಿದೆ,” ಎಂದು ಬರೆದುಕೊಂಡಿದ್ದಾರೆ. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹನಮಣ್ಣರ ಮತ್ತು ಅಲಿ ಗೊರವನಕೊಳ್ಳ ಉಪಸ್ಥಿತರಿದ್ದರು.

ಇದರ ಬೆಲೆ ಎಷ್ಟು ಗೊತ್ತಾ?

ಆಧುನಿಕ ಸುರಕ್ಷಾ ವ್ಯವಸ್ಥೆ ಹೊಂದಿರುವ ಈ ಡಬಲ್‌ ಎಂಜಿನ್‌ನ ಹೆಲಿಕಾಪ್ಟರ್‌ ಬೆಲೆ ಬರೋಬ್ಬರಿ 20 ಕೋಟಿ ರೂ. ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಕನಿಷ್ಠ 9 ಸಾವು, 20 ಜನರಿಗೆ ಗಾಯ; ದೆಹಲಿಯಲ್ಲಿ ಹೈ ಅಲರ್ಟ್; Video

Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆ

Delhi ಕೆಂಪುಕೋಟೆ ಬಳಿ ಕಾರು ಸ್ಫೋಟ; ಬೆಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆ

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

SCROLL FOR NEXT