ಗದಗದಲ್ಲಿ ಕನಕೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಧವನ್ ರಾಕೇಶ್  
ರಾಜ್ಯ

ಧವನ್ ರಾಕೇಶ್ ಹೆಸರು ಹೇಳಿ ಖುಷಿಯಿಂದ ಸ್ವಾಗತಿಸಿದ CM ಸಿದ್ದರಾಮಯ್ಯ: ಗದಗದಲ್ಲಿ ವೇದಿಕೆ ಹಂಚಿಕೊಂಡ ತಾತ-ಮೊಮ್ಮಗ; Video

ವೇದಿಕೆಯಲ್ಲಿ ಮೊಮ್ಮಗನ ಮುಂದಾಳತ್ವದಲ್ಲಿ ಡೊಳ್ಳು ಬಾರಿಸುವ ಮೂಲಕ ತಾತ ಸಿಎಂ ಸಿದ್ದರಾಮಯ್ಯ ಜೊತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ರಾಕೇಶ್ ಅವರ ಮಗ ಧವನ್ ಸಿದ್ದರಾಮಯ್ಯ ರಾಜಕೀಯಕ್ಕೆ ಎಂಂಟ್ರಿ ಕೊಡುತ್ತಾರಾ, ಹೀಗೊಂದು ವಿಷಯ ನಿನ್ನೆಯಿಂದ ಚರ್ಚೆಯಾಗುತ್ತಿದೆ. ಅದಕ್ಕೆ ಕಾರಣ ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಹಾಗೂ ರಾಜ್ಯ ಮಟ್ಟದ ಕನಕೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮೊಮ್ಮಗ ಧವನ್ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು.

ವೇದಿಕೆಯಲ್ಲಿ ಮೊಮ್ಮಗನ ಮುಂದಾಳತ್ವದಲ್ಲಿ ಡೊಳ್ಳು ಬಾರಿಸುವ ಮೂಲಕ ತಾತ ಸಿಎಂ ಸಿದ್ದರಾಮಯ್ಯ ಜೊತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮಕ್ಕೆ ಮೊಮ್ಮಗ ಧವನ್​ ಜತೆಗೆ ಬಂದ ಸಿದ್ದರಾಮಯ್ಯ ಆತನ ಜತೆ ಡೊಳ್ಳು ಬಾರಿಸಿದರು. ಗದಗ ನಗರದ ಕನಕ ಭವನದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಸಚಿವ ಹೆಚ್​ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ವೇದಿಕೆಯಲ್ಲಿ ಮಾತನಾಡಲು ಆರಂಭಿಸಿದ ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಸಂಬೋಧಿಸುವಾಗ ಮೊಮ್ಮಗ ಧವನ್ ರಾಕೇಶ್ ಸಿದ್ದರಾಮಯ್ಯ ಎಂದು ಸಂಬೋಧಿಸಿದ್ದು ವಿಶೇಷವಾಗಿತ್ತು. ತಾತನ ಜೊತೆ ಮೊಮ್ಮಗ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ಅವರ ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ ಸಹಜವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT