ಆರೋಪಿ ಮನೋಜ್ ಹಾಗೂ ಹತ್ಯೆಗೀಡಾದ ಮಂಜುನಾಥ್ ಚಿತ್ರ 
ರಾಜ್ಯ

ಬೆಂಗಳೂರು: ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ!

ಸೆ.2 ರಂದು ದಾಸರಹಳ್ಳಿಯ ಕೆಂಪೇಗೌಡ ನಗರದಲ್ಲಿ ಉದ್ಯಮಿ ಮಂಜುನಾಥ್ ಅವರನ್ನು ಮನೆಯಲ್ಲಿಯೇ ಕೊಲೆ ಮಾಡಲಾಗಿದೆ.

ಬೆಂಗಳೂರು: ಆಸ್ತಿಗಾಗಿ ಸ್ನೇಹಿತನೊಂದಿಗೆ ಸೇರಿ ತಂದೆಯನ್ನೇ ಕೊಲೆ ಪಾಪಿ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ನಗರದ ಬಾಗಲಗುಂಟೆಯಲ್ಲಿ ನಡೆದಿದೆ. ಕೊಲೆಗೆ ಸಹಕರಿಸಿದ ಆತನ ಸ್ನೇಹಿತ ಪ್ರವೀಣ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಮನೋಜ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದಾಸರಹಳ್ಳಿಯ ಕೆಂಪೇಗೌಡ ನಗರದ ಉದ್ಯಮಿ ಮಂಜುನಾಥ್ ಮೃತ ದುರ್ದೈವಿ. ಆರೋಪಿ ಮನೋಜ್ 10ನೇ ತರಗತಿಗೆ ಶಾಲೆ ಬಿಟ್ಟು, ಕೆಲಸವಿಲ್ಲದೆ ಅಲೆದಾಡುತ್ತಿದ್ದ ಎನ್ನಲಾಗಿದೆ.

ಸೆ.2 ರಂದು ದಾಸರಹಳ್ಳಿಯ ಕೆಂಪೇಗೌಡ ನಗರದಲ್ಲಿ ಉದ್ಯಮಿ ಮಂಜುನಾಥ್ ಅವರನ್ನು ಮನೆಯಲ್ಲಿಯೇ ಕೊಲೆ ಮಾಡಲಾಗಿದೆ. ಅವರ ಪತ್ನಿ ಹಾಗೂ ಕಿರಿಯ ಮಗ ವೈದ್ಯಕೀಯ ತಪಾಸಣೆಗಾಗಿ ಹೊರಗೆ ಹೋಗಿದ್ದಾಗ ಕೊಲೆ ಮಾಡಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಇದೊಂದು ಕೊಲೆ ಅನ್ನೋದು ಬಯಲಾಗಿದೆ.

ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮನೋಜ್ ಮನೆಯವರಿಗೆ ಹೇಳಿದ್ದ. ತದನಂತರ ಮಂಜುನಾಥ್ ಅವರ ತಾಯಿ ಹಾಗೂ ಕಿರಿಯ ಮಗ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು.

ಮಂಜುನಾಥ್ ಐದಾರು ಬಿಲ್ಡಿಂಗ್, ನಾಲ್ಕೈದು ಸೈಟ್, ಒಂದು ವುಡ್ ವರ್ಕ್ಸ್ ಫ್ಯಾಕ್ಟರಿ ಅನ್ನು ಹೊಂದಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದು, ದೊಡ್ಡ ಮಗ ಮನೋಜ್ ಕೆಲಸ ಕಾರ್ಯ ಮಾಡದೆ ಸುತ್ತಾಡಿಕೊಂಡಿರುತ್ತಿದ್ದ. ಹೀಗಾಗಿ ತಂದೆ, ಮಗನಿಗೆ ಆಗಾಗ ಬುದ್ಧಿ ಹೇಳ್ತಿದ್ದರು. ಇದರಿಂದ ಮಗ ಮನೋಜ್, 5 ವರ್ಷದ ಹಿಂದೆಯೇ ಅಪ್ಪನನ್ನ ಕೊಂದು ಆಸ್ತಿ ಹೊಡೆಯೋ ಪ್ಲಾನ್ ಮಾಡಿದ್ದ. ಹೀಗಾಗಿ ಸ್ನೇಹಿತ ಪ್ರವೀಣ್‌ಗೆ 15 ಲಕ್ಷ ರೂ. ಸುಪಾರಿ ನೀಡಿ, 15,000 ರೂ. ಹಣವನ್ನು ಅಡ್ವಾನ್ಸ್ ಆಗಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ.2 ರಂದು ವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ತಂದೆಯನ್ನು, ಮನೋಜ್ ವಿಶಾಂತ್ರಿ ತೆಗೆದುಕೊಳ್ಳಿ ಎಂದು ಹೇಳಿ ಮನೆಗೆ ಕಳುಹಿಸಿದ್ದ. ಮಂಜಣ್ಣ ಮನೆಯಲ್ಲಿ ಸೋಫಾ ಮೇಲೆ ಮಲಗಿದ್ದಾಗ ಮದ್ಯಪಾನ ಮಾಡಿ, ಮನೋಜ್ ಹಾಗೂ ಆತನ ಸ್ನೇಹಿತ ಪ್ರವೀಣ್ ಬಂದಿದ್ದರು. ಈ ವೇಳೆ ಇಬ್ಬರು ಸೇರಿ ಟವಲ್‌ನಿಂದ ಮಂಜಣ್ಣನ ಕುತ್ತಿಗೆಗೆ ಬಿಗಿದು ಕೊಂದಿದ್ದರು.

ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಥೆ ಕಟ್ಟಿದ್ದರು. ಆದ್ರೆ ಮೃತದೇಹವನ್ನು ಕಂಡ ಪೋಲಿಸರಿಗೆ ಆಗಲೇ ಅನುಮಾನ ಶುರುವಾಗಿತ್ತು. ಇದೀಗ ಮರಣೋತ್ತರ ವರದಿಯಲ್ಲಿ ಮಗನ ಬಂಡವಾಳ ಬಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT