ಅರ್ಚಕರು ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು. 
ರಾಜ್ಯ

ದಸರಾ ಉದ್ಘಾಟನೆಗೆ ಮುನ್ನ ಚಾಮುಂಡಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಭಾಗಿ

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು.

ಮೈಸೂರು: ನಾಡ ಅಧಿದೇವತೆ ಮೈಸೂರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ದಸರಾ ಉದ್ಘಾಟನೆ ಅತಿಥಿ ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮೈಸೂರಿನ ಶಾಸಕರು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಹಾಜರಿದ್ದರು.

ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್‌ ದೇವಸ್ಥಾನಕ್ಕೆ ಆಗಮಿಸಿದರು. ಗರ್ಭಗುಡಿ ಮುಂಭಾಗದ ಆವರಣದಲ್ಲಿ ನಿಂತು ತಾಯಿ ಚಾಮುಂಡಿ ದರ್ಶನ ಪಡೆದರು. ನಂತರ ಗಣಪತಿಗೆ ಕೈ ಮುಗಿದು, ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದರು.

ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಇಡೀ ಕುಟುಂಬವೇ ಹಾಜರಾಗಿದೆ. ಖಾಸಗಿ ಹೋಟೆಲಿನಿಂದ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್‌ ಆಗಮಿಸಿದರೆ ಸಿಎಂ ಮತ್ತು ಸಚಿವರು ಐರಾವತ ಬಸ್ಸಿನಲ್ಲಿ ಆಗಮಿಸಿದರು.

ಜಾನಪತ ಕಲಾತಂಡಗಳು ಗಣ್ಯರನ್ನು ಸ್ವಾಗತ ಮಾಡಿದವು. ನಂತರ ಜಾನಪದ ಕಲಾ ತಂಡಗಳ ಜೊತೆ ಮಹಿಷಾಸುರ ಪ್ರತಿಮೆಯಿಂದ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಚಾಮುಂಡಿ ದೇವಸ್ಥಾನದ ಒಳಗಡೆ ಪ್ರವೇಶಿಸಿ ಪೂಜೆಯಲ್ಲಿ ಭಾಗಿಯಾದರು.

ನಾಡದೇವಿಗೆ ಬಾನು ಮುಷ್ತಾಕ್ ಅವರು ಪೂಜೆ ಸಲ್ಲಿಸಿ ಭಕ್ತಿಯಿಂದ ಭಾಗಿಯಾಗಿ ಮಹಾಮಂಗಳಾರತಿ ಸ್ವೀಕರಿಸಿದರು. ದೇವಿಯ ದರ್ಶನ ಪಡೆದು ಭಾವುಕರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ