ಸಾಹಿತಿ ಬಾನು ಮುಷ್ತಾಕ್ ಗೆ ಸನ್ಮಾನ  
ರಾಜ್ಯ

ನನಗೆ ಬೂಕರ್ ಪ್ರಶಸ್ತಿ ಬಂದಾಗ ನನ್ನ ಆಪ್ತ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುವುದಾಗಿ ಹೇಳಿದ್ದಳು: ಬಾನು ಮುಷ್ತಾಕ್

ಈ ಬಾರಿಯ ದಸರಾ ಉದ್ಘಾಟನೆಗೆ ನನಗೆ ಸರ್ಕಾರ ಆಹ್ವಾನ ನೀಡಿದಾಗ ಹಲವು ವಿರೋಧ,ವಿಘ್ನಗಳು ಬಂದವು. ಆದರೆ ಅವೆಲ್ಲವನ್ನೂ ನಿವಾರಿಸಿ ಗಟ್ಟಿಯಾಗಿ ನಿಂತು ನನ್ನನ್ನು ಉದ್ಘಾಟನೆಗೆ ಆಹ್ವಾನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರದ ಜನಪ್ರತಿನಿಧಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ಮೈಸೂರು: ನನಗೆ ಬೂಕರ್ ಪ್ರಶಸ್ತಿ ಬಂದ ಸಂದರ್ಭದಲ್ಲಿ ನನ್ನ ಆಪ್ತ ಗೆಳತಿ ನನ್ನನ್ನು ಮೈಸೂರು ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುವುದಾಗಿ ಹೇಳಿಕೊಂಡಿದ್ದಳು. ಇಂದು ಮೈಸೂರು ಚಾಮುಂಡಿ ದೇವಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ. ಇದು ನನ್ನ ಜೀವಮಾನದ ಸೌಭಾಗ್ಯ, ಸರ್ಕಾರ ದಸರಾ ಉದ್ಘಾಟನೆಗೆ ನನ್ನನ್ನು ಕರೆಸಿಕೊಂಡಿದ್ದಾಳೆ ಎಂದು ಮೈಸೂರು ದಸರಾಕ್ಕೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದ ಬಳಿಕ ಬಾನು ಮುಷ್ತಾಕ್ ಹೇಳಿದರು.

ಈ ಬಾರಿಯ ದಸರಾ ಉದ್ಘಾಟನೆಗೆ ನನಗೆ ಸರ್ಕಾರ ಆಹ್ವಾನ ನೀಡಿದಾಗ ಹಲವು ವಿರೋಧ,ವಿಘ್ನಗಳು ಬಂದವು. ಆದರೆ ಅವೆಲ್ಲವನ್ನೂ ನಿವಾರಿಸಿ ಗಟ್ಟಿಯಾಗಿ ನಿಂತು ನನ್ನನ್ನು ಉದ್ಘಾಟನೆಗೆ ಆಹ್ವಾನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರದ ಜನಪ್ರತಿನಿಧಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ನಾವೆಲ್ಲರೂ ಒಂದೇ ಗಗನದ ಅಡಿಯ ಪಯಣಿಗರು ಇಲ್ಲಿ ಅರಳುವಂಥ ಹೂವುಗಳ ಸುಗಂಧಕ್ಕೆ ಮಿತಿಯಿಲ್ಲ, ಇಲ್ಲಿ ಯಾರನ್ನೂ ಹೊರತಲ್ಲ, ಇಲ್ಲಿ ಹಾಕಿರುವ ಗಡಿಗಳನ್ನು ನಾವೇ ಅಳಿಸಿ ಹಾಕಬೇಕು, ನಮ್ಮೊಳಗಿರುವ ದ್ವೇಷ, ಅಸಹಿಷ್ಣುತೆ ನಾಶವಾಗಲಿ ಎಂದರು.

ತಾಯಿ ಚಾಮುಂಡಿ ಧೈರ್ಯ, ಶಕ್ತಿ, ರಕ್ಷಕತ್ವದ ಸಂಕೇತ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ, ಹಗೆಗಳಿಂದ ಅಲ್ಲ ಪ್ರೀತಿಯಿಂದ ಜಗವನ್ನು ಗೆಲ್ಲೋಣ

ನನ್ನ ಪುಸ್ತಕ ನಾಳೆ ಬಿಡುಗಡೆ

ನನ್ನ ಆತ್ಮಚರಿತ್ರೆಯ ಬರಹಗಳನ್ನೊಳಗೊಂಡ ಪುಸ್ತಕ ಕನ್ನಡ ಪುಸ್ತಕ ಪ್ರಾಧಿಕಾರದಿಂದ ನಾಳೆ ಬಿಡುಗಡೆಯಾಗುತ್ತಿದೆ. ಅದರಲ್ಲಿ ನಾನು ಹಿಂದೂ ಧರ್ಮದೊಂದಿಗೆ ಹೇಗೆ ಬಾಂಧವ್ಯ ಹೊಂದಿಕೊಂಡು ಇಷ್ಟು ವರ್ಷಗಳಿಂದ ಬಂದಿದ್ದೇನೆ ಎಂಬುದನ್ನು ವಿವರಿಸಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT