ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ನವರಾತ್ರಿ ಮೊದಲ ದಿನವೇ ಅಕ್ರಮ ಗೋಹತ್ಯೆ ಗುಂಪಿನ ಮೇಲೆ ಪೊಲೀಸ್ ದಾಳಿ, 9 ಗೋವುಗಳ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಸಂಗಬೆಟ್ಟು ಗ್ರಾಮದಲ್ಲಿ ಸೋಮವಾರ ಪೊಲೀಸರು ಅಕ್ರಮ ಗೋಹತ್ಯೆ ನಡೆಸುತ್ತಿದ್ದುದನ್ನು ತಡೆದು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಂಗಬೆಟ್ಟು ಗ್ರಾಮದಲ್ಲಿ ಸೋಮವಾರ ಪೊಲೀಸರು ಅಕ್ರಮ ಗೋಹತ್ಯೆ ನಡೆಸುತ್ತಿದ್ದುದನ್ನು ತಡೆದು ಒಂಬತ್ತು ಗೋವುಗಳನ್ನು ರಕ್ಷಿಸಿದ್ದು ಈ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನ ಮನೆಯೊಂದರ ಹಿಂದಿನ ಶೆಡ್ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಚಾಕು ಮತ್ತು ಮಚ್ಚಿನಿಂದ ಗೋವುಗಳನ್ನು ವಧಿಸುತ್ತಿದ್ದ ಗುಂಪೊಂದು ಪತ್ತೆಯಾಗಿದೆ.

ಪೊಲೀಸ್ ತಂಡವನ್ನು ನೋಡಿದ್ದೆ ತಡ ಹೆಚ್ಚಿನ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಸುರತ್ಕಲ್‌ನ ಕೃಷ್ಣಾಪುರದ ತೌಸಿಫ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖೆಯ ಸಮಯದಲ್ಲಿ, ಈ ಗುಂಪು ಈಗಾಗಲೇ ಆರು ವರ್ಷದ ಕರುವನ್ನು ಪರವಾನಗಿ ಇಲ್ಲದೆ ಹತ್ಯೆ ಮಾಡಿದೆ. ಅಲ್ಲದೆ ವಧೆಗಾಗಿ ಒಂಬತ್ತು ದನಗಳನ್ನು ಕಟ್ಟಿಹಾಕಲಾಗಿತ್ತು ಎಂದು ತಿಳಿದುಬಂದಿದೆ.

ರಕ್ಷಿಸಲಾದ ಪ್ರಾಣಿಗಳನ್ನು ಗೋಶಾಲೆಗೆ ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆಯಲ್ಲಿ ಬಳಸಲಾಗಿದೆ ಎನ್ನಲಾದ ಆಟೋರಿಕ್ಷಾವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ, ಕರ್ನಾಟಕ ಗೋಹತ್ಯೆ ತಡೆ ಮತ್ತು ಗೋ ಸಂರಕ್ಷಣಾ ಕಾಯ್ದೆ 2020ರ ನಿಬಂಧನೆಗಳು ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತೌಸಿಫ್‌ನನ್ನು ಬಂಟ್ವಾಳ ಎಸಿಜೆಎಂ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಣೆ ಭೂ ಹಗರಣ: ಮಹಾರಾಷ್ಟ್ರ ಸರ್ಕಾರದಿಂದ ಕವರ್‌ಅಪ್? FIR ನಲ್ಲಿ ಅಜಿತ್ ಪವಾರ್ ಪುತ್ರನ ಹೆಸರಿಲ್ಲ, ಆದ್ರೆ...

ಟೋಪಿ ಧರಿಸುವಂತ ಪರಿಸ್ಥಿತಿ ಬಂದರೆ ನನ್ನ ತಲೆಯನ್ನೇ ಕತ್ತರಿಸಿಕೊಳ್ಳುತ್ತೇನೆ: ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಂಡಿ ಸಂಜಯ್ ವಾಗ್ದಾಳಿ

Mark Teaser: ಕಿಚ್ಚ ಸುದೀಪ್ ಮಾಸ್ ಅವತಾರಕ್ಕೆ ಅಭಿಮಾನಿಗಳು ಫಿದಾ, ಡಿ.25ಕ್ಕೆ ರಸದೌತಣ!

'ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರದಿಂದ ದಲಿತರ ಭೂಮಿ ಕಳ್ಳತನ': ಮೋದಿ ಮೌನ ಪ್ರಶ್ನಿಸಿದ ರಾಹುಲ್

ಅಕ್ರಮ ಪರಮಾಣು ಚಟುವಟಿಕೆಗಳು ಪಾಕಿಸ್ತಾನದ ದೀರ್ಘಕಾಲೀನ ಅಭ್ಯಾಸ: ಟ್ರಂಪ್ ಹೇಳಿಕೆ ಕುರಿತು ಭಾರತ ತೀಕ್ಷ್ಣ ಪ್ರತಿಕ್ರಿಯೆ!

SCROLL FOR NEXT