ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕ ರಾಜು ಸಾವು 
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ: ಅರ್ಚಕ ರಾಜು ನಿಧನ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಎಲ್ಲಾ ಅಡೆತಡೆಗಳು ಮೀರಿ ನಿನ್ನೆ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆಯೂ ಸಿಕ್ಕಿತ್ತು. ಆದರೆ ಇದೀಗ ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಎಲ್ಲಾ ಅಡೆತಡೆಗಳು ಮೀರಿ ನಿನ್ನೆ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆಯೂ ಸಿಕ್ಕಿತ್ತು. ಆದರೆ ಇದೀಗ ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. ಹೌದು... ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಇಂದು ರಾತ್ರಿವರೆಗೂ ಮೂಲ ವಿಗ್ರಹದ ದರ್ಶನ ಇರುವುದಿಲ್ಲ. ಅರ್ಚಕನ ನಿಧನದಿಂದಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಡಕಾಗಿದೆ. ಆದಾಗ್ಯೂ, ದಸರಾ ಉತ್ಸವಕ್ಕೆ ಇದರಿಂದ ಯಾವುದೇ ಅಡಚಣೆ ಆಗುವುದಿಲ್ಲ. ಕೆಲವು ವಿಧಿವಿಧಾನಗಳ ನಂತರ ಗರ್ಭಗುಡಿ ಬಾಗಿಲು ತೆರೆಯಲಿದೆ. ನವರಾತ್ರಿ ಪೂಜೆಗಳು ಮಾಮೂಲಿಯಂತೆಯೇ ನಡೆಯಲಿವೆ ಎಂದು ದೇಗುಲದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಪ್ರಕರಣ: ದಕ್ಷಿಣ ಕನ್ನಡದಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು!

Biggboss ಸ್ಪರ್ಧಿ Rithu Video Leaked: ನನ್ನ ಗಂಡನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ; ವಿಡಿಯೋ ಹರಿಬಿಟ್ಟ ನಟ ಧರ್ಮ ಪತ್ನಿ!

Indian Stock Market: ಸತತ 2ನೇ ದಿನವೂ ಷೇರುಮಾರುಕಟ್ಟೆ ಕುಸಿತ, Sensex 57 ಅಂಕ ಇಳಿಕೆ!

ಅಸ್ಸಾಂ: ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಗಾಯಕ ಜುಬೀನ್ ಗರ್ಗ್ ಅಂತ್ಯಕ್ರಿಯೆ

Mysuru Dasara 2025: ಆಹಾರ ಮೇಳದಲ್ಲಿ 'ನೆಮ್ಮದಿಯಾಗಿ ಊಟ ಮಾಡಿ' ನಾನ್ ವೆಜ್ ಹೋಟೆಲ್! ಡೆವಿಲ್ ಪ್ರಚಾರ ತಂತ್ರನಾ?

SCROLL FOR NEXT