ಕರ್ನಾಟಕ ಹೈಕೋರ್ಟ್ 
ರಾಜ್ಯ

ಡೆವಲಪರ್‌ಗಳಿಗೆ ವಿಳಂಬ ಶುಲ್ಕ; ರೇರಾ ಸುತ್ತೋಲೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ಆಕ್ಷೇಪಾರ್ಹ ಸುತ್ತೋಲೆಯನ್ನು ಪ್ರಶ್ನಿಸಿ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಪ್ರಮೋಟರ್ಸ್‌ಗಳು ಸಲ್ಲಿಸಿದ 75 ಅರ್ಜಿಗಳನ್ನು ಮಾನ್ಯ ಮಾಡಿ ಆದೇಶ ಹೊರಡಿಸಿದರು.

ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (RERA-K) 2020ರ ಸೆಪ್ಟೆಂಬರ್ 3 ರಂದು ಹೊರಡಿಸಿದ ಸುತ್ತೋಲೆಯನ್ನು ರದ್ದುಗೊಳಿಸುವ ಮೂಲಕ ಕರ್ನಾಟಕ ಹೈಕೋರ್ಟ್ ರಿಯಲ್ ಎಸ್ಟೇಟ್ ಡೆವಲಪರ್‌ಗಳು ಮತ್ತು ಪ್ರಮೋಟರ್ಸ್‌ಗಳಿಗೆ ಬಿಗ್ ರಿಲೀಫ್ ನೀಡಿದೆ.

ಈ ಸುತ್ತೋಲೆಯು ಡೆವಲಪರ್‌ಗಳು ತ್ರೈಮಾಸಿಕ ಯೋಜನಾ ನವೀಕರಣಗಳು ಅಥವಾ ವಾರ್ಷಿಕ ಆಡಿಟ್ ವರದಿಗಳನ್ನು ತಡವಾಗಿ (ಯೋಜನೆಯು ಎಷ್ಟೇ ದೊಡ್ಡದಾಗಿದ್ದರೂ ಅಥವಾ ಚಿಕ್ಕದಾಗಿದ್ದರೂ, ಅದು ಯಾವ ಹಂತದಲ್ಲಿತ್ತು ಅಥವಾ ಯಾವುದೇ ವಿಶೇಷ ಸಂದರ್ಭಗಳನ್ನು ಒಳಗೊಂಡಿದ್ದರೂ) ಸಲ್ಲಿಸಿದರೆ 'ವಿಳಂಬ ಶುಲ್ಕ' ಪಾವತಿಸುವುದನ್ನು ಕಡ್ಡಾಯಗೊಳಿಸಿತ್ತು.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ಆಕ್ಷೇಪಾರ್ಹ ಸುತ್ತೋಲೆಯನ್ನು ಪ್ರಶ್ನಿಸಿ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಪ್ರಮೋಟರ್ಸ್‌ಗಳು ಸಲ್ಲಿಸಿದ 75 ಅರ್ಜಿಗಳನ್ನು ಮಾನ್ಯ ಮಾಡಿ ಆದೇಶ ಹೊರಡಿಸಿದರು. RERA ಯಾವುದೇ ನಾಗರಿಕನ ಮೇಲೆ, ಅದು ದೊಡ್ಡದಾಗಿರಲಿ ಅಥವಾ ಚಿಕ್ಕದಾಗಿರಲಿ, ಆರ್ಥಿಕ ಹೊರೆಯನ್ನು ಹೇರಲು ಬಯಸಿದರೆ, ಅದನ್ನು ಕಾನೂನು ಮೂಲಕವೇ ಅಧಿಕೃತಗೊಳಿಸಬೇಕು ಎಂದು ನ್ಯಾಯಾಲಯ ಹೇಳಿದೆ.

RERA ನಂತಹ ಪ್ರಾಧಿಕಾರ ದಂಡ ಅಥವಾ ಶುಲ್ಕ ವಿಧಿಸಲು ಮುಂದಾದರೆ ಅದು ಕಾನೂನಿನ ಅಡಿಯಲ್ಲಿ ಸ್ಪಷ್ಟವಾಗಿರಬೇಕು ಮತ್ತು ಶಾಸಕಾಂಗ ಪ್ರಕ್ರಿಯೆಯನ್ನು ಅನುಸರಿಸಿರಬೇಕು. ಈ ಸುತ್ತೋಲೆಗೆ ಸರಿಯಾದ ಕಾನೂನು ಬೆಂಬಲವಿಲ್ಲ. RERA ಕಾನೂನಿನ ಅಡಿಯಲ್ಲಿ ಅಗತ್ಯ ಅಧಿಕಾರವಿಲ್ಲದೆ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ ಎಂದು ನ್ಯಾಯಾಲಯ ತಿಳಿಸಿದೆ.

2016ರ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆಯ ಸೆಕ್ಷನ್ 11, 34 ಮತ್ತು 37 ರ ಮೇಲಿನ RERA ನ ಅವಲಂಬನೆಯು ಸಂಪೂರ್ಣವಾಗಿ ತಪ್ಪಾಗಿದೆ. ಆದ್ದರಿಂದ, ಈ ಯಾವುದೇ ನಿಬಂಧನೆಗಳಿಂದ, 'ವಿಳಂಬ ಶುಲ್ಕ' ವಿಧಿಸಲು ಸಾಧ್ಯವಿಲ್ಲ. ಅದನ್ನು ವಿಧಿಸುವ ಸುತ್ತೋಲೆಯು ಅನಿಯಂತ್ರಿತ, ಕಾನೂನುಬಾಹಿರ ಮತ್ತು ಅನೂರ್ಜಿತವಾಗಿದೆ ಎಂದಿದೆ.

ಈ ಎಲ್ಲ ಪ್ರಕರಣಗಳಲ್ಲಿ ಅರ್ಜಿದಾರರು ಸುತ್ತೋಲೆಯನ್ನು ರದ್ದುಗೊಳಿಸುವುದರಿಂದ ಉಂಟಾಗುವ ಯಾವುದೇ ಪ್ರಯೋಜನಗಳಿಗೆ ಅರ್ಹರಾಗಿದ್ದಾರೆ. ಈ ನಿರ್ದಿಷ್ಟ ಸುತ್ತೋಲೆಯನ್ನು ರದ್ದುಗೊಳಿಸಲಾಗಿದ್ದರೂ, ಸರ್ಕಾರ ಅಥವಾ RERA ಅಂತಹ ಶುಲ್ಕವನ್ನು ವಿಧಿಸಲು ಹೊಸ ಕಾನೂನು ಅಥವಾ ನಿಯಮವನ್ನು ರಚಿಸುವುದನ್ನು ಇದು ತಡೆಯುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ATM Robbery: 'ನಾನೇ ಬರ್ಬೇಕು ಅಂದ್ಕೊಡಿದ್ದೆ.. ನೀವೇ ಬಂದ್ರಿ..': ಪೊಲೀಸರ ಬಳಿ ಕಿಂಗ್ ಪಿನ್ ರವಿ ಪತ್ನಿ ಸ್ಫೋಟಕ ಹೇಳಿಕೆ, ರಿಕವರಿ ಹಣ ಏನಾಯ್ತು?

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ; ಶಾಸಕರಿಗೆ ಡಿಸಿಎಂ ಗಾಳ?: ಪರಪ್ಪನ ಅಗ್ರಹಾರಕ್ಕೆ ಡಿಕೆ ಶಿವಕುಮಾರ್ ಭೇಟಿ!

ಖಾತೆ ಹಂಚಿದ ನಿತೀಶ್ ಕುಮಾರ್; 20 ವರ್ಷಗಳಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಗೃಹ ಖಾತೆ

ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ; ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

SCROLL FOR NEXT