ಸಂಗ್ರಹ ಚಿತ್ರ 
ರಾಜ್ಯ

Shocking: ಶೌಚಾಲಯವೆಂದು Cockpit ಬಾಗಿಲು ತೆರೆಯಲು ಬೆಂಗಳೂರಿಗ ಯತ್ನ; Air India ವಿಮಾನದಲ್ಲಿ ಘಟನೆ

ಸೋಮವಾರ ಬೆಳಿಗ್ಗೆ 8 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX-1086 ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿತ್ತು.

ನವದೆಹಲಿ: ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾರ್ಗಮಧ್ಯೆ ಬೆಂಗಳೂರಿನ ಪ್ರಯಾಣಿಕನೊಬ್ಬ ಶೌಚಾಲಯವೆಂದು ವಿಮಾನದ ಕಾಕ್‌ಪಿಟ್ ಬಾಗಿಲನ್ನು ತೆರೆಯಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ನಡೆದಿದೆ.

ಸೋಮವಾರ ಬೆಳಿಗ್ಗೆ 8 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX-1086 ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಪ್ರಯಾಣಿಕನೊಬ್ಬ ಕಾಕ್‌ ಪಿಟ್ ಪ್ರದೇಶ ಪ್ರವೇಶಿಸಿದ್ದಲ್ಲದೆ, ಅದರ ಬಾಗಿಲನ್ನು ಸಹ ತೆರೆಯಲು ಪ್ರಯತ್ನಸಿದ್ದಾನೆ.

ಕಾಕ್‌ಪಿಟ್ ಬಾಗಿಲು ತೆರೆಯಬೇಕೆಂದರೆ ಪಾಸ್‌ಕೋಡ್ ನಮೂದಿಸುವುದು ಅಗತ್ಯ. ಪಾಸ್‌ಕೋಡ್ ಹಾಕಿದ ನಂತರ ಪೈಲಟ್ ಬಾಗಿಲನ್ನು ತೆರೆಯಲು ಅವಕಾಶ ನೀಡಬಹುದು. ಹೀಗಾಗಿ ಬಾಗಿಲು ತೆರೆಯಲು ಸಾಧ್ಯವಾಗದ ಕಾರಣ ಮರಳಿ ತನ್ನ ಸೀಟ್‌ಗೆ ಬಂದು ಕುಳಿತಿದ್ದಾನೆ.

ಇತರ 8 ಪ್ರಯಾಣಿಕರೊಂದಿಗೆ ಆತ ತೆರಳುತ್ತಿದ್ದ. ಅದು ಅವನ ಮೊದಲ ವಿಮಾನ ಪ್ರಯಾಣವಾಗಿತ್ತು. ಆದರೆ ವಿಮಾನಕ್ಕೆ ಯಾವುದೇ ರೀತಿಯ ಭದ್ರತಾ ಬೆದರಿಕೆ ಒಡ್ಡಿಲ್ಲ ಎಂದು ತಿಳಿದುಬಂದಿದೆ.

ಆರಂಭದಲ್ಲಿ ವ್ಯಕ್ತಿ ಸರಿಯಾದ ಪಾಸ್‌ಕೋಡ್ ಅನ್ನು ಒತ್ತಿದ್ದಾನೆಂಬಊಹಾಪೋಹವಿತ್ತು, ಆದರೆ, ಏರ್ ಇಂಡಿಯಾ ಸ್ಪಷ್ಟನೆ ನೀಡಿದೆ. ಕಾಕ್‌ಪಿಟ್ ಪ್ರವೇಶ ಕೋಡ್ ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗೆ ಮಾತ್ರ ತಿಳಿದಿರುತ್ತದೆ. ಇತರೆ ವ್ಯಕ್ತಿಗಳಿಗೆ ಮಾಹಿತಿ ಇರುವುದಿಲ್ಲ ಎಂದು ತಿಳಿಸಿದೆ.

ಈ ನಡುವೆ ವಿಮಾನ ವಾರಾಣಸಿಯಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿಗಳ ವಶಕ್ಕೆ ನೀಡಲಾಗಿದೆ.

ವ್ಯಕ್ತಿಯನ್ನು ಕಾಶಿಯ ಫೂಲ್ ಪುರ ಪೊಲೀಸರು ಬಂಧಿಸಿದ್ದು, ಆತನ ಜತೆಗಿದ್ದ ಇನ್ನೂ 8 ಜನ ಕಾಶಿ ಯಾತ್ರಿಕರ ವಿಚಾರಣೆ ನಡೆಸುತ್ತಿದ್ದಾರೆ.

ಕಾಕ್‌ಪಿಟ್ ಬಾಗಿಲು ತೆರೆಯಲು ವ್ಯಕ್ತಿ ಯತ್ನಿಸಿದ್ದೇಕೆ ಎಂಬುದು ತಿಳಿದುಬಂದಿಲ್ಲ. ಆದರೆ ಶೌಚಾಲಯ ಹುಡುಕುತ್ತಿದ್ದ ಆತ ತಪ್ಪಾಗಿ ಕಾಕೌಟ್ ಬಾಗಿಲು ತೆರೆಯಲು ಯತ್ನಿಸಿರಬಹುದು ಎಂದು ಹೇಳಲಾಗುತ್ತಿದೆ.

ವಿಮಾನದ ಸುರಕ್ಷತಾ ನಿಯಮ ವ್ಯವಸ್ಥಿತ 'ವಾಗಿವೆ ಮತ್ತು ಅದರೊಂದಿಗೆ ಯಾವುದೇ ರಾಜಿಯಿಲ್ಲ ಎಂದು ನಾವು ಖಚಿತಪಡಿಸುತ್ತೇವೆ. ಆದರೂ ದೂರು ನೀಡಿದ್ದೇವೆ. ವಿಮಾನ ವಾರಾಣಸಿಯಲ್ಲಿ ಲ್ಯಾಂಡ್ ಆದಬಳಿಕ ವ್ಯಕ್ತಿ ಹಾಗೂ ಇತರ 8 ಜನರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮಗೆ ಬುದ್ಧಿವಂತಿಕೆಯ ಕೊರತೆಯಿದ್ದರೆ AI ಬಗ್ಗೆ ಪೋಸ್ಟ್ ಮಾಡಬೇಡಿ: ರಾಹುಲ್ ಗೆ ಬಿಜೆಪಿ

ಚೀನಾದ ರೋಬೋಟ್ ಡಾಗ್ ವಿವಾದ: AI Summit expoದಿಂದ ಗಾಲ್ಗೋಟಿಯಾಸ್ ವಿವಿಗೆ ಸ್ಟಾಲ್ ತೆರವುಗೊಳಿಸಲು ಸೂಚನೆ-Video

'ಅವರು ರಕ್ತದ ರುಚಿ ನೋಡಿದ್ದಾರೆ': PCB ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಪಾಕ್ ಮಾಜಿ ಪ್ರಧಾನಿ ಸೋದರಿಯರ ಗಂಭೀರ ಆರೋಪ

T20 World Cup 2026: ಭಾರತದ ವಿರುದ್ಧ ಪಂದ್ಯ ಆಡಲು 'Actual Hero' ಕಾರಣ; ವರಸೆ ಬದಲಿಸಿದ ಪಾಕಿಸ್ತಾನ!

ಜೇವರ್ಗಿ-ಬಳ್ಳಾರಿ ಮಾರ್ಗ ಸೇರಿ ರಾಜ್ಯದ 6 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಅನುಮೋದನೆ

SCROLL FOR NEXT