ಸಂಗ್ರಹ ಚಿತ್ರ 
ರಾಜ್ಯ

Shocking: ಶೌಚಾಲಯವೆಂದು Cockpit ಬಾಗಿಲು ತೆರೆಯಲು ಬೆಂಗಳೂರಿಗ ಯತ್ನ; Air India ವಿಮಾನದಲ್ಲಿ ಘಟನೆ

ಸೋಮವಾರ ಬೆಳಿಗ್ಗೆ 8 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX-1086 ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಪ್ರಯಾಣಿಕನೊಬ್ಬ ಕಾಕ್‌ ಪಿಟ್ ಪ್ರದೇಶ ಪ್ರವೇಶಿಸಿದ್ದಲ್ಲದೆ, ಅದರ ಬಾಗಿಲನ್ನು ಸಹ ತೆರೆಯಲು ಪ್ರಯತ್ನಸಿದ್ದಾನೆ.

ನವದೆಹಲಿ: ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾರ್ಗಮಧ್ಯೆ ಬೆಂಗಳೂರಿನ ಪ್ರಯಾಣಿಕನೊಬ್ಬ ಶೌಚಾಲಯವೆಂದು ವಿಮಾನದ ಕಾಕ್‌ಪಿಟ್ ಬಾಗಿಲನ್ನು ತೆರೆಯಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ನಡೆದಿದೆ.

ಸೋಮವಾರ ಬೆಳಿಗ್ಗೆ 8 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX-1086 ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಪ್ರಯಾಣಿಕನೊಬ್ಬ ಕಾಕ್‌ ಪಿಟ್ ಪ್ರದೇಶ ಪ್ರವೇಶಿಸಿದ್ದಲ್ಲದೆ, ಅದರ ಬಾಗಿಲನ್ನು ಸಹ ತೆರೆಯಲು ಪ್ರಯತ್ನಸಿದ್ದಾನೆ.

ಕಾಕ್‌ಪಿಟ್ ಬಾಗಿಲು ತೆರೆಯಬೇಕೆಂದರೆ ಪಾಸ್‌ಕೋಡ್ ನಮೂದಿಸುವುದು ಅಗತ್ಯ. ಪಾಸ್‌ಕೋಡ್ ಹಾಕಿದ ನಂತರ ಪೈಲಟ್ ಬಾಗಿಲನ್ನು ತೆರೆಯಲು ಅವಕಾಶ ನೀಡಬಹುದು. ಹೀಗಾಗಿ ಬಾಗಿಲು ತೆರೆಯಲು ಸಾಧ್ಯವಾಗದ ಕಾರಣ ಮರಳಿ ತನ್ನ ಸೀಟ್‌ಗೆ ಬಂದು ಕುಳಿತಿದ್ದಾನೆ.

ಇತರ 8 ಪ್ರಯಾಣಿಕರೊಂದಿಗೆ ಆತ ತೆರಳುತ್ತಿದ್ದ. ಅದು ಅವನ ಮೊದಲ ವಿಮಾನ ಪ್ರಯಾಣವಾಗಿತ್ತು. ಆದರೆ ವಿಮಾನಕ್ಕೆ ಯಾವುದೇ ರೀತಿಯ ಭದ್ರತಾ ಬೆದರಿಕೆ ಒಡ್ಡಿಲ್ಲ ಎಂದು ತಿಳಿದುಬಂದಿದೆ.

ಆರಂಭದಲ್ಲಿ ವ್ಯಕ್ತಿ ಸರಿಯಾದ ಪಾಸ್‌ಕೋಡ್ ಅನ್ನು ಒತ್ತಿದ್ದಾನೆಂಬಊಹಾಪೋಹವಿತ್ತು, ಆದರೆ, ಏರ್ ಇಂಡಿಯಾ ಸ್ಪಷ್ಟನೆ ನೀಡಿದೆ. ಕಾಕ್‌ಪಿಟ್ ಪ್ರವೇಶ ಕೋಡ್ ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗೆ ಮಾತ್ರ ತಿಳಿದಿರುತ್ತದೆ. ಇತರೆ ವ್ಯಕ್ತಿಗಳಿಗೆ ಮಾಹಿತಿ ಇರುವುದಿಲ್ಲ ಎಂದು ತಿಳಿಸಿದೆ.

ಈ ನಡುವೆ ವಿಮಾನ ವಾರಾಣಸಿಯಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿಗಳ ವಶಕ್ಕೆ ನೀಡಲಾಗಿದೆ.

ವ್ಯಕ್ತಿಯನ್ನು ಕಾಶಿಯ ಫೂಲ್ ಪುರ ಪೊಲೀಸರು ಬಂಧಿಸಿದ್ದು, ಆತನ ಜತೆಗಿದ್ದ ಇನ್ನೂ 8 ಜನ ಕಾಶಿ ಯಾತ್ರಿಕರ ವಿಚಾರಣೆ ನಡೆಸುತ್ತಿದ್ದಾರೆ.

ಕಾಕ್‌ಪಿಟ್ ಬಾಗಿಲು ತೆರೆಯಲು ವ್ಯಕ್ತಿ ಯತ್ನಿಸಿದ್ದೇಕೆ ಎಂಬುದು ತಿಳಿದುಬಂದಿಲ್ಲ. ಆದರೆ ಶೌಚಾಲಯ ಹುಡುಕುತ್ತಿದ್ದ ಆತ ತಪ್ಪಾಗಿ ಕಾಕೌಟ್ ಬಾಗಿಲು ತೆರೆಯಲು ಯತ್ನಿಸಿರಬಹುದು ಎಂದು ಹೇಳಲಾಗುತ್ತಿದೆ.

ವಿಮಾನದ ಸುರಕ್ಷತಾ ನಿಯಮ ವ್ಯವಸ್ಥಿತ 'ವಾಗಿವೆ ಮತ್ತು ಅದರೊಂದಿಗೆ ಯಾವುದೇ ರಾಜಿಯಿಲ್ಲ ಎಂದು ನಾವು ಖಚಿತಪಡಿಸುತ್ತೇವೆ. ಆದರೂ ದೂರು ನೀಡಿದ್ದೇವೆ. ವಿಮಾನ ವಾರಾಣಸಿಯಲ್ಲಿ ಲ್ಯಾಂಡ್ ಆದಬಳಿಕ ವ್ಯಕ್ತಿ ಹಾಗೂ ಇತರ 8 ಜನರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್ 200 ರೂಪಾಯಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್‌-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ

ಉಪ್ರಾಷ್ಟ್ರಪತಿ ಕಚೇರಿಯಲ್ಲಿ ಧನ್ಕರ್ ನೇಮಿಸಿದ್ದ ಎಲ್ಲಾ ಸಿಬ್ಬಂದಿಗಳಿಗೆ ಗೇಟ್ ಪಾಸ್: ಹೊಸ ಸಿಬ್ಬಂದಿಗಳ ನೇಮಿಸಿದ VP Radhakrishnan!

"False Hindu God": ಅಮೆರಿಕದಲ್ಲಿ ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!

GST ಕಡಿತ, ಹಬ್ಬದ ಸೀಸನ್ ನಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಗಗನಕ್ಕೆ; ಎಂದಿಗಿಂತ ಶೇ.50 ರಷ್ಟು ಹೆಚ್ಚಳ!

SCROLL FOR NEXT