ಸ್ವಾತಿ-ಸೂರ್ಯ 
ರಾಜ್ಯ

ಶಿವಮೊಗ್ಗ: ಓದು ಮುಗಿದ ಮೇಲೆ ಮದುವೆ ಅಂದಿದ್ದಕ್ಕೆ ಕಾಲುವೆಗೆ ತಳ್ಳಿ ಪ್ರೇಯಸಿಯನ್ನು ಕೊಂದ ಪ್ರಿಯಕರ!

ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ ಗ್ರಾಮದ ಬಳಿ ಭದ್ರಾ ಕಾಲುವೆಯ ಹತ್ತಿರಕ್ಕೆ ಪ್ರಿಯಕರ ಸೂರ್ಯ ಕರೆದುಕೊಂಡು ಹೋಗಿದ್ದಾನೆ.

ಶಿವಮೊಗ್ಗ: ಮದುವೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನೇ ಕೊಂದಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ ಗ್ರಾಮದ ಬಳಿ ಭದ್ರಾ ಕಾಲುವೆಯ ಹತ್ತಿರಕ್ಕೆ ಪ್ರಿಯಕರ ಸೂರ್ಯ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಮದುವೆ ವಿಚಾರ ಪ್ರಸ್ತಾಪವಾಗಿದೆ. ಇದಕ್ಕೆ ಸ್ವಾತಿ ಸದ್ಯಕ್ಕೆ ಮದುವೆ ಬೇಡ ಅಂತ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಸೂರ್ಯ ಆಕೆಯನ್ನು ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಸೂರ್ಯ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಸೂರ್ಯ, ಸ್ವಾತಿ ಇಬ್ಬರೂ ಕೂಡ ಪದವಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿತ್ತು. ಆದರೆ ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಸ್ವಾತಿ ಸೂರ್ಯನಿಂದ ದೂರವಾಗಿದ್ದಳು. ಇದರಿಂದ ಕೋಪಗೊಂಡ ಸೂರ್ಯ ಈ ದುಷ್ಕೃತ್ಯ ಎಸಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಸೂರ್ಯ ಹಾಗೂ ಕೊಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಸೂರ್ಯನ ತಂದೆ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: ಬಾಂಗ್ಲಾದೇಶ ಬಗ್ಗು ಬಡಿದ ಭಾರತ, ಫೈನಲ್ ಗೆ ಲಗ್ಗೆ, Srilanka ಟೂರ್ನಿಯಿಂದ ಔಟ್!

ಲಡಾಖ್ ಹಿಂಸಾಚಾರಕ್ಕೆ ನಾಲ್ವರು ಬಲಿ: 30 ಜನರಿಗೆ ಗಾಯ; ಬಿಜೆಪಿ ಕಚೇರಿ, ಪೊಲೀಸ್ ವ್ಯಾನ್ ಗೆ ಬೆಂಕಿ; Video

ನನ್ನ ರಾಷ್ಟ್ರ ನಿರ್ಮಾಣದ ಆಶಯಗಳಿಗೆ ಎಸ್ಎಲ್ ಭೈರಪ್ಪನವರೇ ಪ್ರೇರಣೆ: BJP ಸಂಸದ ತೇಜಸ್ವೀ ಸೂರ್ಯ

Asia Cup 2025: 'ಎಲ್ರಿಗೂ ವ್ಯಕ್ತಪಡಿಸುವ ಹಕ್ಕಿದೆ.. ಅವ್ರು ಫೈನಲ್ ಗೆ ಬರ್ಲಿ ನೋಡೋಣ': Team india ಕುರಿತು ಪಾಕ್ ವೇಗಿ Shaheen Afridi

6 ದಶಕಗಳ ಕಾಲ India Air Force ಬೆನ್ನೆಲುಬು MiG-21 fighter jet ಗೆ ಸೆ.26ರಂದು ವಿದಾಯ

SCROLL FOR NEXT