ಕೆಎಸ್ ಆರ್ ಟಿಸಿ online desk
ರಾಜ್ಯ

ಕೇಂದ್ರದಿಂದ GST ಕಡಿತದ ಸಿಹಿ ಸುದ್ದಿ ನಡುವೆ, ಮತ್ತೆ ಬಸ್ ದರ ಏರಿಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು!

ದೇಸಿ ಹಾಲಿನ ಪ್ಯಾಕೆಟ್​ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ.

ಬೆಂಗಳೂರು: ಒಂದೆಡೆ ಕೇಂದ್ರ ಸರ್ಕಾರ GST ಸ್ಲ್ಯಾಬ್ ಗಳನ್ನು ಇಳಿಕೆ ಮಾಡುವ ಮೂಲಕ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಿದ್ದರೆ, ರಾಜ್ಯ ಸರ್ಕಾರ ಮತ್ತೊಂದು ಸುತ್ತಿನ ಬೆಲೆ ಏರಿಕೆ ಶಾಕ್ ಕೊಡಲು ಸಿದ್ಧತೆ ನಡೆಸಿದೆ.

ದೇಸಿ ಹಾಲಿನ ಪ್ಯಾಕೆಟ್​ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ. ವಿದ್ಯುತ್ ದರ ಏರಿಕೆಯ ಮಾದರಿಯಲ್ಲೇ ಇನ್ನು ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಸಾರಿಗೆ ಸಂಸ್ಥೆಗಳ ದರ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ.

ಸಾರಿಗೆ ದರ ನಿಯಂತ್ರಣ ಸಮಿತಿ

KERC ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1989ರ ಅಡಿಯಲ್ಲಿ ದರ ನಿಯಂತ್ರಣ ಸಮಿತಿಯನ್ನ ರಾಜ್ಯ ಸರ್ಕಾರ ರಚನೆ ಮಾಡಿದೆ. ಈ ಸಮಿತಿ ಪ್ರತಿ ವರ್ಷ ರಸ್ತೆ ಸಾರಿಗೆ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಿದೆ.

ಕಾಲಕಾಲಕ್ಕೆ ದರ ಪರಿಷ್ಕರಣೆ

ಈ ಸಮಿತಿ ಅಧ್ಯಕ್ಷರು ಹಾಗೂ ಇನ್ನಿಬ್ಬರು ಸದಸ್ಯರನ್ನು ಒಳಗೊಂಡಿದ್ದು. ಕಾಲಕಾಲಕ್ಕೆ ದರ ಪರಿಷ್ಕರಣೆ ಮಾಡಲಿದೆ. ಇಂಧನ ದರ ಹೆಚ್ಚುತ್ತಿರುವ ಹಿನ್ನೆಲೆ ದೀರ್ಘಾವಧಿಯಲ್ಲಿ ಒಂದೇ ಬಾರಿ ಪ್ರಯಾಣ ದರ ಏರಿಕೆ ಬದಲು ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವುದು ಸಮಿತಿ ರಚನೆಯ ಹಿಂದಿನ ಉದ್ದೇಶವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar: 'ಅಂದು ಇದೇ ಕೊಳಕು ಕಿಡ್ನಿ ನಿಮ್ಮ ಪ್ರಾಣ ಉಳಿಸಿತು, ಇಂದು ಚಪ್ಪಲಿಯಲ್ಲಿ ಥಳಿಸುತ್ತಿದ್ದಾರೆ'..: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ

'ಶ್ರೀರಾಮನನ್ನು ಎಂದಿಗೂ ಇಷ್ಟಪಟ್ಟಿಲ್ಲ': Varanasi ಟೈಟಲ್ ಘೋಷಣೆ ಬೆನ್ನಲ್ಲೇ ರಾಜಮೌಳಿ ಟ್ವೀಟ್ ವೈರಲ್!

WTC 2025-27 points table: ದ.ಆಫ್ರಿಕಾ ವಿರುದ್ಧ ಹೀನಾಯ ಸೋಲು, ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಕುಸಿದ ಭಾರತ!

"ಬಿಹಾರದ ಚುನಾವಣೆಗಾಗಿ ಕೇಂದ್ರದಿಂದ ವಿಶ್ವ ಬ್ಯಾಂಕ್ ನ 14,000 ಕೋಟಿ ರೂಪಾಯಿ ದುರುಪಯೋಗ"!

Delhi Red Fort blast case: ಸ್ಫೋಟದ ಸ್ಥಳದಲ್ಲಿ 9 mm ಕಾರ್ಟ್ರಿಡ್ಜ್‌ ಗಳು ಪತ್ತೆ; ಭಯೋತ್ಪಾದಕ ನಂಟು ದೃಢ!

SCROLL FOR NEXT