ಕೆಎಸ್ ಆರ್ ಟಿಸಿ online desk
ರಾಜ್ಯ

ಕೇಂದ್ರದಿಂದ GST ಕಡಿತದ ಸಿಹಿ ಸುದ್ದಿ ನಡುವೆ, ಮತ್ತೆ ಬಸ್ ದರ ಏರಿಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು!

ದೇಸಿ ಹಾಲಿನ ಪ್ಯಾಕೆಟ್​ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ.

ಬೆಂಗಳೂರು: ಒಂದೆಡೆ ಕೇಂದ್ರ ಸರ್ಕಾರ GST ಸ್ಲ್ಯಾಬ್ ಗಳನ್ನು ಇಳಿಕೆ ಮಾಡುವ ಮೂಲಕ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಿದ್ದರೆ, ರಾಜ್ಯ ಸರ್ಕಾರ ಮತ್ತೊಂದು ಸುತ್ತಿನ ಬೆಲೆ ಏರಿಕೆ ಶಾಕ್ ಕೊಡಲು ಸಿದ್ಧತೆ ನಡೆಸಿದೆ.

ದೇಸಿ ಹಾಲಿನ ಪ್ಯಾಕೆಟ್​ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ. ವಿದ್ಯುತ್ ದರ ಏರಿಕೆಯ ಮಾದರಿಯಲ್ಲೇ ಇನ್ನು ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಸಾರಿಗೆ ಸಂಸ್ಥೆಗಳ ದರ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ.

ಸಾರಿಗೆ ದರ ನಿಯಂತ್ರಣ ಸಮಿತಿ

KERC ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1989ರ ಅಡಿಯಲ್ಲಿ ದರ ನಿಯಂತ್ರಣ ಸಮಿತಿಯನ್ನ ರಾಜ್ಯ ಸರ್ಕಾರ ರಚನೆ ಮಾಡಿದೆ. ಈ ಸಮಿತಿ ಪ್ರತಿ ವರ್ಷ ರಸ್ತೆ ಸಾರಿಗೆ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಿದೆ.

ಕಾಲಕಾಲಕ್ಕೆ ದರ ಪರಿಷ್ಕರಣೆ

ಈ ಸಮಿತಿ ಅಧ್ಯಕ್ಷರು ಹಾಗೂ ಇನ್ನಿಬ್ಬರು ಸದಸ್ಯರನ್ನು ಒಳಗೊಂಡಿದ್ದು. ಕಾಲಕಾಲಕ್ಕೆ ದರ ಪರಿಷ್ಕರಣೆ ಮಾಡಲಿದೆ. ಇಂಧನ ದರ ಹೆಚ್ಚುತ್ತಿರುವ ಹಿನ್ನೆಲೆ ದೀರ್ಘಾವಧಿಯಲ್ಲಿ ಒಂದೇ ಬಾರಿ ಪ್ರಯಾಣ ದರ ಏರಿಕೆ ಬದಲು ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವುದು ಸಮಿತಿ ರಚನೆಯ ಹಿಂದಿನ ಉದ್ದೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿರಿಯ ಸಾಹಿತಿ SL Bhyrappa ನಿಧನ

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೋರಾಟ; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಬಿಜೆಪಿ ಕಚೇರಿಗೆ ಬೆಂಕಿ

'ಸನ್ ಆಕಾಶದಲ್ಲಿ ಬೆಳಗುತ್ತಿರುವಾಗ, ಅದನ್ನು ಘೋಷಿಸುವ ಅಗತ್ಯವಿಲ್ಲ': ಬಿಹಾರ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿಗೆ ಕಾಂಗ್ರೆಸ್ ಬೆಂಬಲ

'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ AIRSTRIKE ಕುರಿತು ಭಾರತ ವ್ಯಂಗ್ಯ

SCROLL FOR NEXT