ಸಚಿವ ಪ್ರಿಯಾಂಕ್ ಖರ್ಗೆ  online desk
ರಾಜ್ಯ

ಮಂಗಳೂರಿನಲ್ಲಿ ಟೆಕ್ ಪಾರ್ಕ್ ಸ್ಥಾಪಿಸಲು ಪ್ರಸ್ತಾಪ, ಸಂಪುಟದ ಅನುಮೋದನೆ ನಿರೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರಾವಳಿ ಕರ್ನಾಟಕದ ಐಟಿ ವಲಯವನ್ನು ಉತ್ತೇಜಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.

ಮಂಗಳೂರು: ಮಂಗಳೂರಿನಲ್ಲಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರಾವಳಿ ಕರ್ನಾಟಕದ ಐಟಿ ವಲಯವನ್ನು ಉತ್ತೇಜಿಸುವ ಗುರಿಯನ್ನು ಈ ಯೋಜನೆ ಹೊಂದಿದ್ದು ಶೀಘ್ರದಲ್ಲೇ ಸಂಪುಟದ ಅನುಮೋದನೆ ಪಡೆಯುವ ನಿರೀಕ್ಷೆಯಿದೆ ಎಂದು ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನುರಿತ ಕಾರ್ಯಪಡೆ, ಶಿಕ್ಷಣ ಸಂಸ್ಥೆಗಳು ಮತ್ತು ಸಂಪರ್ಕವನ್ನು ಹೊಂದಿರುವ ಮಂಗಳೂರು ಬೆಂಗಳೂರಿನ ಹೊರಗೆ ಐಟಿ ಕೇಂದ್ರವಾಗಿ ಹೊರಹೊಮ್ಮುವ ಸಾಮರ್ಥ್ಯವನ್ನು ಹೊಂದಿದೆ. ಟೈಯರ್ 2 ನಗರಗಳನ್ನು ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಮೂಲಕ ಸರ್ಕಾರ ಸಮತೋಲಿತ ಪ್ರಾದೇಶಿಕ ಬೆಳವಣಿಗೆಯ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಹೇಳಿದರು.

ಮಂಗಳೂರು ಐಟಿ ಮತ್ತು ಸಂಬಂಧಿತ ಕೈಗಾರಿಕೆಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಮೂಲಸೌಕರ್ಯ ಮತ್ತು ಪ್ರತಿಭಾ ನೆಲೆಯನ್ನು ಹೊಂದಿದೆ. ಪ್ರಸ್ತಾವಿತ ಟೆಕ್ ಪಾರ್ಕ್ ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸುತ್ತದೆ. ಉದ್ಯೋಗಗಳು ಸೃಷ್ಟಿಯಾಗಲಿದ್ದು ಸ್ಥಳೀಯ ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ಖರ್ಗೆ ಹೇಳಿದರು. ಈ ಯೋಜನೆಯು ಕರ್ನಾಟಕದಲ್ಲಿ ಉದ್ಯಮಶೀಲತೆ ಮತ್ತು ಡಿಜಿಟಲ್ ನಾವೀನ್ಯತೆಯನ್ನು ಉತ್ತೇಜಿಸುವ ಅಸ್ತಿತ್ವದಲ್ಲಿರುವ ಸರ್ಕಾರಿ ಉಪಕ್ರಮಗಳಿಗೆ ಪೂರಕವಾಗಿರುತ್ತದೆ ಎಂದು ಸಚಿವರು ಹೇಳಿದರು.

ಸಂಪುಟ ಮಟ್ಟದಲ್ಲಿ ಅನುಮೋದನೆಗಾಗಿ ಸಿದ್ಧತೆಗಳನ್ನು ತ್ವರಿತಗೊಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪ್ರಸ್ತಾವಿತ ಪಾರ್ಕ್ ಐಟಿ/ಐಟಿಇಎಸ್ ಕಂಪನಿಗಳಿಗೆ ಮೂಲಸೌಕರ್ಯ, ಇನ್‌ಕ್ಯುಬೇಶನ್ ಕೇಂದ್ರಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಸಹಯೋಗದ ಸ್ಥಳಗಳನ್ನು ಒದಗಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಯು ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸುತ್ತದೆ. ಕೌಶಲ್ಯಪೂರ್ಣ ಯುವಕರು ಮಹಾನಗರಗಳಿಗೆ ವಲಸೆ ಹೋಗುವುದನ್ನು ತಡೆಯುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Ladakh violence ಗೆ ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ: ಕೇಂದ್ರ ಸರ್ಕಾರ

ಲಡಾಖ್ ಹಿಂಸಾಚಾರಕ್ಕೆ ನಾಲ್ವರು ಬಲಿ: 30 ಜನರಿಗೆ ಗಾಯ; ಬಿಜೆಪಿ ಕಚೇರಿ, ಪೊಲೀಸ್ ವ್ಯಾನ್ ಗೆ ಬೆಂಕಿ; Video

Asia Cup 2025: ಇತಿಹಾಸ ಬರೆದ Abhishek Sharma, ಶ್ರೀಲಂಕಾ ಲೆಜೆಂಡ್ Sanath Jayasuriya ದಾಖಲೆ ಪತನ

Asia Cup 2025: ಬಾಂಗ್ಲಾದೇಶ ಬಗ್ಗು ಬಡಿದ ಭಾರತ, ಫೈನಲ್ ಗೆ ಲಗ್ಗೆ, Srilanka ಟೂರ್ನಿಯಿಂದ ಔಟ್!

Asia Cup 2025: ಭಾರತ ಕಳಪೆ ಫೀಲ್ಡಿಂಗ್, Saif Hassan ಗೆ 4 ಬಾರಿ ಜೀವದಾನ, ಬಾಂಗ್ಲಾ ಬ್ಯಾಟರ್ ವಿಚಿತ್ರ ದಾಖಲೆ! Elite Group ಸೇರ್ಪಡೆ!

SCROLL FOR NEXT