ಸಿದ್ದರಾಮಯ್ಯ-ಅಜೀಂ ಪ್ರೇಮ್‌ಜಿ 
ರಾಜ್ಯ

Wipro ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ Azim Premji

ಇದು ಕಂಪನಿಗೆ ಗಂಭೀರ ಕಾನೂನು, ಆಡಳಿತಾತ್ಮಕ ಮತ್ತು ಶಾಸನಬದ್ಧ ಸವಾಲುಗಳನ್ನು ಒಡ್ಡುತ್ತದೆ. ಏಕೆಂದರೆ ಇದು ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು ಸಾರ್ವಜನಿಕ ಸಾರಿಗೆಗೆ ಉದ್ದೇಶಿಸಿಲ್ಲ.

ಬೆಂಗಳೂರು: ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕೆಂಬ ಸಿಎಂ ಸಿದ್ದರಾಮಯ್ಯ ಮನವಿಯನ್ನು ವಿಪ್ರೋ ಸಂಸ್ಥಾಪಕ ಮತ್ತು ಅಧ್ಯಕ್ಷ ಅಜೀಜ್ ಪ್ರೇಮ್‌ಜಿ ತಿರಸ್ಕರಿಸಿದ್ದಾರೆ. ಕ್ಯಾಂಪಸ್ ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು, ಸಾರ್ವಜನಿಕ ಸಾರಿಗೆಗೆ ಅಲ್ಲ ಎಂದು ಅಧ್ಯಕ್ಷ ಅಜೀಮ್ ಪ್ರೇಮ್‌ಜಿ ಹೇಳಿದ್ದಾರೆ. ಕ್ಯಾಂಪಸ್ ಮೂಲಕ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ನೀಡುವುದರಿಂದ ಗಮನಾರ್ಹ ಕಾನೂನು, ಆಡಳಿತಾತ್ಮಕ ಮತ್ತು ಶಾಸಕಾಂಗ ಸವಾಲುಗಳು ಎದುರಾಗುತ್ತವೆ ಎಂದರು.

ಸೆಪ್ಟೆಂಬರ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜೀಜ್ ಪ್ರೇಮ್‌ಜಿ ಅವರಿಗೆ ಪತ್ರ ಬರೆದು, ಬೆಂಗಳೂರು ಹೊರ ವರ್ತುಲ ರಸ್ತೆಯಲ್ಲಿ ಹೆಚ್ಚುತ್ತಿರುವ ದಟ್ಟಣೆಯನ್ನು ಕಡಿಮೆ ಮಾಡುವ ಉಪಕ್ರಮದ ಭಾಗವಾಗಿ ಕಂಪನಿಯು ತನ್ನ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕೆಂದು ವಿನಂತಿಸಿದ್ದರು. ಈ ಕ್ರಮವು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಐಟಿ ಕಾರಿಡಾರ್‌ನಲ್ಲಿ ಪ್ರಯಾಣಿಸುವವರಿಗೆ ಗಮನಾರ್ಹ ಪರಿಹಾರವನ್ನು ನೀಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದರು.

ಸಿಎಂ ಸಿದ್ದರಾಮಯ್ಯ ಅವರ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಜೀಜ್ ಪ್ರೇಮ್‌ಜಿ ಅವರು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯ ಗಂಭೀರ ಸಮಸ್ಯೆಯನ್ನು ಪರಿಹರಿಸಿದ್ದಕ್ಕಾಗಿ ನಾವು ಸಿಎಂ ಅವರನ್ನು ಶ್ಲಾಘಿಸುತ್ತೇವೆ ಎಂದು ಬರೆದಿದ್ದಾರೆ. ಆದಾಗ್ಯೂ, ನಮ್ಮ ಸರ್ಜಾಪುರ ಕ್ಯಾಂಪಸ್ ಮೂಲಕ ಸಾರ್ವಜನಿಕ ವಾಹನಗಳಿಗೆ ಅವಕಾಶ ನೀಡುವ ಸಲಹೆಯನ್ನು ನಾವು ಒಪ್ಪುವುದಿಲ್ಲ. ಇದು ಕಂಪನಿಗೆ ಗಂಭೀರ ಕಾನೂನು, ಆಡಳಿತಾತ್ಮಕ ಮತ್ತು ಶಾಸನಬದ್ಧ ಸವಾಲುಗಳನ್ನು ಒಡ್ಡುತ್ತದೆ. ಏಕೆಂದರೆ ಇದು ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು ಸಾರ್ವಜನಿಕ ಸಾರಿಗೆಗೆ ಉದ್ದೇಶಿಸಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!

ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ಮುಂದಾದ ರಷ್ಯಾ!

ಚಿಕ್ಕಬಳ್ಳಾಪುರ: 70 ಸಾವಿರ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ

'ತುಂಬಾ ಲೇಟ್ ಆಯಿತು': ಇರಾನ್​ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT