ಶಾಸಕ ಟಿ.ಡಿ ರಾಜೇಗೌಡ 
ರಾಜ್ಯ

ಅಕ್ರಮ ಆಸ್ತಿ ಗಳಿಕೆ, ಭ್ರಷ್ಟಾಚಾರ ಆರೋಪ; ಮತ್ತೋರ್ವ ಕೈ ಶಾಸಕನ 'ಇಡೀ ಕುಟುಂಬದ' ವಿರುದ್ಧ FIR ದಾಖಲು!

ಈ ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್‌ದೇವ್ ಅವರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿದೆ.

ಚಿಕ್ಕಮಗಳೂರು : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಜಿಲ್ಲೆಯ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಈ ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್‌ದೇವ್ ಅವರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿದೆ.

ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರೆಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದಾರೆ. ಈ ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರಿನ ಮೇಲೆ ಗಂಭೀರ ಕ್ರಮ ಕೈಗೊಂಡಿತು. ತನಿಖೆಗೆ ಆದೇಶ ನೀಡಿ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್‌ಪಿ) ಸೂಚನೆ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿತು. ಈ ಆದೇಶದಂತೆ ಲೋಕಾಯುಕ್ತ ಕಚೇರೆಯು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಸೆಪ್ಟೆಂಬರ್ 16ರಂದು ನ್ಯಾಯಾಲಯವು ಫೈನಲ್ ಆದೇಶ ನೀಡಿ, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತು.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಈ ಎಫ್‌ಐಆರ್‌ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 (ಅಧಿಕಾರಿಯಾಗಿ ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!

ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಬೌಲರ್‌ಗೆ ಗಾಯ; ವೀಲ್‌ಚೇರ್‌ನಲ್ಲಿ ಸ್ಥಳಾಂತರ, Video!

ಜುಬೀನ್ ಗರ್ಗ್ ಸಾವಿನ ಪ್ರಕರಣ: ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿ ಬಂಧಿಸಿದ SIT

Wipro ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ Azim Premji

SCROLL FOR NEXT