ಕೃಷಿ ಸಚಿವ ಚಲುವರಾಯಸ್ವಾಮಿ 
ರಾಜ್ಯ

ಕಾವೇರಿ ಆರತಿ: ಪ್ರತಿ ದಿನ ಒಂದೊಂದು ತಾಲೂಕಿನ ಜನರಿಗೆ ಆಹ್ವಾನ; ಸಚಿವ ಚಲುವರಾಯಸ್ವಾಮಿ

ಕಾವೇರಿ ಆರತಿಗೆ ಶಾಶ್ವತವಾಗಿ ಜಾಗ ಗುರುತು ಮಾಡಿಲ್ಲ. ಕೋರ್ಟ್‌ನಲ್ಲಿ ಕೇಸ್ ಇದೆ. ಹೀಗಾಗಿ ಅದು ಮುಗಿದ ಮೇಲೆ ಶಾಶ್ವತ ವ್ಯವಸ್ಥೆ ಮಾಡುತ್ತೇವೆ. ಈಗ ಇರುವ ಉತ್ತಮ ಜಾಗದಲ್ಲಿ ಮಾಡಿದ್ದೇವೆ ಎಂದರು.

ಬೆಂಗಳೂರು: ಶುಕ್ರವಾರದಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳು ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ‌ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ಆರತಿಗೆ ಸದ್ಯ ಶಾಶ್ವತ ವ್ಯವಸ್ಥೆ ಮಾಡಿಲ್ಲ. ಇರುವ ಜಾಗದಲ್ಲಿ ಕಾವೇರಿ ಆರತಿ ನಾಳೆಯಿಂದ ಪ್ರಾರಂಭ ಮಾಡುತ್ತಿದ್ದೇವೆ. ಕಾರ್ಯಕ್ರಮಕ್ಕೆ ನಾಳೆ ಡಿಸಿಎಂ ಚಾಲನೆ ಕೊಡುತ್ತಾರೆ ಎಂದು ಮಾಹಿತಿ ನೀಡಿದರು.

ಕಾವೇರಿ ಆರತಿಗೆ ಶಾಶ್ವತವಾಗಿ ಜಾಗ ಗುರುತು ಮಾಡಿಲ್ಲ. ಕೋರ್ಟ್‌ನಲ್ಲಿ ಕೇಸ್ ಇದೆ. ಹೀಗಾಗಿ ಅದು ಮುಗಿದ ಮೇಲೆ ಶಾಶ್ವತ ವ್ಯವಸ್ಥೆ ಮಾಡುತ್ತೇವೆ. ಈಗ ಇರುವ ಉತ್ತಮ ಜಾಗದಲ್ಲಿ ಮಾಡಿದ್ದೇವೆ ಎಂದರು.

ನಿತ್ಯ ಒಂದೊಂದು ತಾಲೂಕು ಜನರಿಗೆ ಬರೋದಕ್ಕೆ ಹೇಳಿದ್ದೇವೆ. ನಾಳೆ 3 ತಾಲೂಕು ಜನರಿಗೆ ಆಹ್ವಾನ ನೀಡಲಾಗಿದೆ. ನಾವು ಹಿಂದುತ್ವ ವಿರೋಧಿಗಳು ಅಲ್ಲ. ಧಾರ್ಮಿಕ ವಿಚಾರಕ್ಕೂ ನಾವು ವಿರೋಧ ಮಾಡಿಲ್ಲ. ಚಪಲಕ್ಕೆ ಕೆಲವರು ಮಾತಾಡ್ತಾರೆ ಮಾತಾಡಲಿ ಎಂದು ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

Microsoft ತಾಂತ್ರಿಕ ಸಿಬ್ಬಂದಿ ಹೆಸರಲ್ಲಿ ಅಮೆರಿಕನ್ನರಿಗೆ ವಂಚನೆ: ಬೆಂಗಳೂರಿನಲ್ಲಿ 21 ಮಂದಿ ಬಂಧನ

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ನೌಗಮ್ ಠಾಣಾ ಸ್ಫೋಟ: ರಸಾಯನಶಾಸ್ತ್ರ ಮತ್ತು ನಿರ್ಲಕ್ಷ್ಯಗಳ ದುರಂತ ಸಂಗಮ

ಬಿಜೆಪಿಗೆ ಬಿಸಿ ತುಪ್ಪವಾದ ಚಿರಾಗ್ ಪಾಸ್ವಾನ್: ನಿತೀಶ್ ಅವರೇ ನಮ್ಮ ಸಿಎಂ; ನೂತನ ಸರ್ಕಾರ ಸೇರುತ್ತೇವೆ ಎಂದ ಕೇಂದ್ರ ಸಚಿವ! Video

SCROLL FOR NEXT