ಕೃಷಿ ಸಚಿವ ಚಲುವರಾಯಸ್ವಾಮಿ 
ರಾಜ್ಯ

ಕಾವೇರಿ ಆರತಿ: ಪ್ರತಿ ದಿನ ಒಂದೊಂದು ತಾಲೂಕಿನ ಜನರಿಗೆ ಆಹ್ವಾನ; ಸಚಿವ ಚಲುವರಾಯಸ್ವಾಮಿ

ಕಾವೇರಿ ಆರತಿಗೆ ಶಾಶ್ವತವಾಗಿ ಜಾಗ ಗುರುತು ಮಾಡಿಲ್ಲ. ಕೋರ್ಟ್‌ನಲ್ಲಿ ಕೇಸ್ ಇದೆ. ಹೀಗಾಗಿ ಅದು ಮುಗಿದ ಮೇಲೆ ಶಾಶ್ವತ ವ್ಯವಸ್ಥೆ ಮಾಡುತ್ತೇವೆ. ಈಗ ಇರುವ ಉತ್ತಮ ಜಾಗದಲ್ಲಿ ಮಾಡಿದ್ದೇವೆ ಎಂದರು.

ಬೆಂಗಳೂರು: ಶುಕ್ರವಾರದಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳು ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ‌ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ಆರತಿಗೆ ಸದ್ಯ ಶಾಶ್ವತ ವ್ಯವಸ್ಥೆ ಮಾಡಿಲ್ಲ. ಇರುವ ಜಾಗದಲ್ಲಿ ಕಾವೇರಿ ಆರತಿ ನಾಳೆಯಿಂದ ಪ್ರಾರಂಭ ಮಾಡುತ್ತಿದ್ದೇವೆ. ಕಾರ್ಯಕ್ರಮಕ್ಕೆ ನಾಳೆ ಡಿಸಿಎಂ ಚಾಲನೆ ಕೊಡುತ್ತಾರೆ ಎಂದು ಮಾಹಿತಿ ನೀಡಿದರು.

ಕಾವೇರಿ ಆರತಿಗೆ ಶಾಶ್ವತವಾಗಿ ಜಾಗ ಗುರುತು ಮಾಡಿಲ್ಲ. ಕೋರ್ಟ್‌ನಲ್ಲಿ ಕೇಸ್ ಇದೆ. ಹೀಗಾಗಿ ಅದು ಮುಗಿದ ಮೇಲೆ ಶಾಶ್ವತ ವ್ಯವಸ್ಥೆ ಮಾಡುತ್ತೇವೆ. ಈಗ ಇರುವ ಉತ್ತಮ ಜಾಗದಲ್ಲಿ ಮಾಡಿದ್ದೇವೆ ಎಂದರು.

ನಿತ್ಯ ಒಂದೊಂದು ತಾಲೂಕು ಜನರಿಗೆ ಬರೋದಕ್ಕೆ ಹೇಳಿದ್ದೇವೆ. ನಾಳೆ 3 ತಾಲೂಕು ಜನರಿಗೆ ಆಹ್ವಾನ ನೀಡಲಾಗಿದೆ. ನಾವು ಹಿಂದುತ್ವ ವಿರೋಧಿಗಳು ಅಲ್ಲ. ಧಾರ್ಮಿಕ ವಿಚಾರಕ್ಕೂ ನಾವು ವಿರೋಧ ಮಾಡಿಲ್ಲ. ಚಪಲಕ್ಕೆ ಕೆಲವರು ಮಾತಾಡ್ತಾರೆ ಮಾತಾಡಲಿ ಎಂದು ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

SCROLL FOR NEXT