ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಗನ್ ತೋರಿಸಿ ಯುವಕನ ಅಪಹರಣ, ನಾಲ್ವರು ಆರೋಪಿಗಳ ಬಂಧನ

ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಖರೀದಿಸಲು ಆತ ನಗರಕ್ಕೆ ಬಂದಿದ್ದ. ದಾಬಸ್ಪೇಟೆ ತಲುಪುತ್ತಿದ್ದಂತೆ, ಆರೋಪಿಗಳು ಯುವಕನನ್ನು ಪಿಸ್ತೂಲ್ ತೋರಿಸಿ ಬೆದರಿಸಿ 5,000 ರೂ. ಹಣ ಮತ್ತು 75,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ.

ಬೆಂಗಳೂರು: ಪಿಸ್ತೂಲ್ ತೋರಿಸಿ ಯುವಕನನ್ನು ಅಪಹರಿಸಿ, ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪೀಣ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಕನಕಮೂರ್ತಿ, ಕಿರಣ್, ಶ್ರೀನಿವಾಸ್ ಮತ್ತು ಮಾಲಿಂಗ್ ಸಾಬ್ ಶೇಖ್ ಎಂದು ಗುರುತಿಸಲಾಗಿದೆ. ಆಗಸ್ಟ್ 14 ರಂದು ಪೀಣ್ಯ ಪೊಲೀಸ್ ವ್ಯಾಪ್ತಿಯ ಜಾಲಹಳ್ಳಿಯಲ್ಲಿ ತನ್ನ ಊರಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಾಗ ಯುವಕನನ್ನು ಆರೋಪಿಗಳು ಅಪಹರಿಸಿದ್ದರು.

ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಖರೀದಿಸಲು ಆತ ನಗರಕ್ಕೆ ಬಂದಿದ್ದ. ದಾಬಸ್ಪೇಟೆ ತಲುಪುತ್ತಿದ್ದಂತೆ, ಆರೋಪಿಗಳು ಯುವಕನನ್ನು ಪಿಸ್ತೂಲ್ ತೋರಿಸಿ ಬೆದರಿಸಿ 5,000 ರೂ. ಹಣ ಮತ್ತು 75,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ. ನಂತರ ಯುವಕನನ್ನು ಕಾರಿನಿಂದ ಹೊರಗೆ ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಯುವಕ ಸ್ಥಳೀಯರ ಸಹಾಯದಿಂದ ತನ್ನ ಊರಿಗೆ ತಲುಪಿದ್ದು, ನಾಲ್ಕು ದಿನಗಳ ನಂತರ ಪೊಲೀಸರಿಗೆ ದೂರು ನೀಡಿದ್ದಾನೆ.

ಘಟನೆ ನಡೆದ ಹತ್ತು ದಿನಗಳ ನಂತರ, ಮಾರತ್ತಹಳ್ಳಿಯ ದೊಡ್ಡಾನೆಕುಂಡಿಯಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಕಾರು, ಪಿಸ್ತೂಲ್, ಎರಡು ಮೊಬೈಲ್ ಫೋನ್‌ಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕನಕಮೂರ್ತಿ, ಕಿರಣ್, ಶ್ರೀನಿವಾಸ್'ಗೆ ಈ ಹಿಂದೆ ಜೈಲಿನಲ್ಲಿದ್ದ ಶೇಖ್ ಎಂಬ ವ್ಯಕ್ತಿ ಪಿಸ್ತೂಲನ್ನು ನೀಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಇದೀಗ ಪಿಸ್ತೂಲ್ ನೀಡಿದ್ದ ಶೇಖ್'ನನ್ನು ಬಿಜಾಪುರ ಜಿಲ್ಲೆಯ ಹೊರ್ತಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕನಕಮೂರ್ತಿ, ಕಿರಣ್, ಶ್ರೀನಿವಾಸ್ ಅವರನ್ನು ಈ ಹಿಂದೆ ದೌರ್ಜನ್ಯ ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದಾಗ ಆರೋಪಿಗಳು ಶೇಖ್'ನನ್ನು ಭೇಟಿಯಾಗಿದ್ದಾರೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT