ರೈಲಿಗೆ ತಲೆಕೊಟ್ಟ ಯುವಕ ಸತೀಶ್‌  
ರಾಜ್ಯ

ಕೋಲಾರ: ಮದುವೆಗೆ ಮನೆಯವರ ವಿರೋಧ: ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ!

ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಇವರಿಬ್ಬರೂ ಬೇರೆ ಬೇರೆ ಜಾತಿಗೆ ಸೇರಿದ್ದವರಾಗಿದ್ದರಿಂದ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಕೋಲಾರ: ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು.

ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ ಮದುವೆ ಆಗುವುದಕ್ಕೆ ನಿರ್ಧರಿಸಿದ್ದರು ಎನ್ನಲಾಗಿದೆ.

ಅದರಂತೆ ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಇವರಿಬ್ಬರೂ ಬೇರೆ ಬೇರೆ ಜಾತಿಗೆ ಸೇರಿದ್ದವರಾಗಿದ್ದರಿಂದ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಸತೀಶ್‌ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾನೆ. ಇಂದು ಬೆಳಗ್ಗೆ ಇಬ್ಬರು ಮನೆಯಿಂದ ಹೊರಬಂದಿದ್ದಾರೆ. ನಂತರ ಸತೀಶ್‌ ಬೈಕ್‌ನಲ್ಲಿ ತನ್ನ ಲವರ್ ಶ್ವೇತಾಳನ್ನು ಕರೆದುಕೊಂಡು ಮಾಲೂರಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿಹೋಗಿ ಬೈಕ್‌ ನಿಲ್ಲಿಸಿದ್ದಾನೆ. ನಂತರ ಕೋಲಾರದಿಂದ ಬೆಂಗಳೂರಿಗೆ ಹೊರಡುವ ರೈಲು ಬರುವುದನ್ನೇ ಕಾದು ನಿಂತಿದ ಪ್ರೇಮಿಗಳು ರೈಲು ಬರುತ್ತಿದ್ದಂತೆ 6.30 ರ ಸುಮಾರಿನಲ್ಲಿ ಇಬ್ಬರೂ ಕೈ-ಕೈ ಹಿಡಿದು ಹಳಿ ಮೇಲೆ ಹಾರಿ ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದು ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಅವರ ಪೋಷಕರುಗಳಿಗೆ ಮಾಹಿತಿ ರವಾನಿಸಿದ್ದಾರೆ. ಈ ಬಗ್ಗೆ ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!