ಸಂಗ್ರಹ ಚಿತ್ರ 
ರಾಜ್ಯ

ಎಸ್‌.ಎಲ್‌ ಭೈರಪ್ಪ ಸ್ಮಾರಕ ನಿರ್ಮಾಣದ ಕುರಿತು ಸಿಎಂ ಜೊತೆ ಚರ್ಚೆ: DCM ಡಿ.ಕೆ ಶಿವಕುಮಾರ್

ಸ್ಮಾರಕ ನಿರ್ಮಾಣ ತೀರ್ಮಾನ ನನ್ನೊಬ್ಬನದಲ್ಲ. ಸರ್ಕಾರದ ಹಂತದಲ್ಲಿ ಚರ್ಚಿಸಿ ತೀರ್ಮಾನಿಸಬೇಕಾಗುತ್ತದೆ. ಕಲಾವಿದರು, ಸಾಹಿತಿಗಳ ಸ್ಮಾರಕದ ರೀತಿ ಭೈರಪ್ಪ ಅವರ ಸ್ಮಾರಕವೂ ಆಗಬೇಕು.

ಬೆಂಗಳೂರು: ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ ಸ್ಮಾರಕ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಎಸ್‌.ಎಲ್‌. ಭೈರಪ್ಪ ಅಂತಿಮ ದರ್ಶನ ಪಡೆದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಭೈರಪ್ಪ ಅವರ ಸ್ಮಾರಕ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು.

ಸ್ಮಾರಕ ನಿರ್ಮಾಣ ತೀರ್ಮಾನ ನನ್ನೊಬ್ಬನದಲ್ಲ. ಸರ್ಕಾರದ ಹಂತದಲ್ಲಿ ಚರ್ಚಿಸಿ ತೀರ್ಮಾನಿಸಬೇಕಾಗುತ್ತದೆ. ಕಲಾವಿದರು, ಸಾಹಿತಿಗಳ ಸ್ಮಾರಕದ ರೀತಿ ಭೈರಪ್ಪ ಅವರ ಸ್ಮಾರಕವೂ ಆಗಬೇಕು ಎಂದು ತಿಳಿಸಿದರು.

ಭೈರಪ್ಪ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಾಹಿತಿ. ವಿಶ್ವದ ಹಲವು ಭಾಷೆಗಳಿಗೆ ಅವರ ಕಾದಂಬರಿ ಅನುವಾದಗೊಂಡಿವೆ. ಅವರ ಕಾದಂಬರಿಗಳು ಸಿನೆಮಾಗಳು ಕೂಡ ಆಗಿವೆ. ಸಂಸ್ಕೃತಿ ಎತ್ತಿ ಹಿಡಿದು ಸಮಾಜಕ್ಕೆ ಮಾರ್ಗದರ್ಶನ ಮಾಡಿದವರು ಭೈರಪ್ಪ ಎಂದರು.

ಇದಕ್ಕೂ ಮುನ್ನ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೈರಪ್ಪ ಅವರ ಸ್ಮಾರಕ ನಿರ್ಮಿಸಬೇಕೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ದಾಟಲು ಪ್ರಯತ್ನಿಸುವ ಹಡಗುಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಎಚ್ಚರಿಕೆ; ಅಮೆರಿಕ ಹೇಳಿದ್ದೇನು?

ಅಮೆರಿಕ-ಇಸ್ರೇಲ್ ದಾಳಿಗೆ 165 ಇರಾನ್ ಶಾಲಾ ಬಾಲಕಿಯರು ಬಲಿ: ಅಂತಿಮ ಯಾತ್ರೆಯಲ್ಲಿ ಜನಸಾಗರ, ತೀವ್ರ ಆಕ್ರೋಶ! Video

ರಾಜ್ಯದಲ್ಲೂ SIRಗೆ ಪೂರ್ವ ಸಿದ್ಧತೆ ಆರಂಭ; ಶೇ. 73.2 ರಷ್ಟು ಮತದಾರರ ಮ್ಯಾಪಿಂಗ್

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರ ಸಾವು, ಭಯೋತ್ಪಾದಕ ಕೃತ್ಯ ಶಂಕೆ..!

SCROLL FOR NEXT