ಸಿದ್ದರಾಮಯ್ಯ 
ರಾಜ್ಯ

ಜಾತಿ ಗಣತಿ: ಇಲ್ಲಿಯವರೆಗೆ ಕೇವಲ ಶೇ.2 ರಷ್ಟು ಪ್ರಗತಿ; ಪ್ರತಿದಿನ ಶೇ.10 ರಷ್ಟು ಸಮೀಕ್ಷೆಗೆ ಸಿಎಂ ಸೂಚನೆ; ಗಡುವಿನೊಳಗೆ ಪೂರ್ಣ!

ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ಪ್ರತಿಪಾದಿಸಿದ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಜಾತಿ ಗಣತಿ ವಿಸ್ತರಿಸುವುದಿಲ್ಲ ಎಂದು ಒತ್ತಿ ಹೇಳಿದರು.

ಬೆಂಗಳೂರು: "ಜಾತಿ ಗಣತಿ" ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಪರಿಣಾಮ ಬೀರುವ ತಾಂತ್ರಿಕ ಸಮಸ್ಯೆಗಳನ್ನು "ಬಹುತೇಕ ಬಗೆಹರಿಸಲಾಗಿದೆ" ಮತ್ತು ಸಮೀಕ್ಷೆಯು ಈಗ ಪೂರ್ಣ ಪ್ರಮಾಣದಲ್ಲಿ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ಪ್ರತಿಪಾದಿಸಿದ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಜಾತಿ ಗಣತಿ ವಿಸ್ತರಿಸುವುದಿಲ್ಲ ಎಂದು ಒತ್ತಿ ಹೇಳಿದರು.

ಜಾತಿ ಗಣತಿಗೆ ಸಂಬಂಧಿಸಿದಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, "ಸಮೀಕ್ಷೆಯ ನಿಧಾನಗತಿ", ತಾಂತ್ರಿಕ ದೋಷಗಳು ಮತ್ತು ಸರ್ವರ್ ಸಮಸ್ಯೆಗಳು ದತ್ತಾಂಶ ಸಂಗ್ರಹಣೆಯ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್, ಡಿಸಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳು ಭಾಗವಹಿಸಿದ್ದರು.

"ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22 ರಂದು ಪ್ರಾರಂಭವಾಗಿದ್ದು, ನಿಗದಿಯಂತೆ ಅಕ್ಟೋಬರ್ 7 ರೊಳಗೆ ಪೂರ್ಣಗೊಳ್ಳಲಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿವೆ, ಅವೆಲ್ಲವನ್ನೂ ಬಹುತೇಕ ಪರಿಹರಿಸಲಾಗಿದೆ. ಆದ್ದರಿಂದ, ಇಂದಿನಿಂದ ಸಮೀಕ್ಷೆಯ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ" ಎಂದು ಸಿದ್ದರಾಮಯ್ಯ ಹೇಳಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳು ಸಮೀಕ್ಷೆಯನ್ನು "ಬಹಳ ಗಂಭೀರವಾಗಿ" ಪರಿಗಣಿಸುವಂತೆ ಮತ್ತು ಗಡುವಿನೊಳಗೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

"ಸಮೀಕ್ಷಾ ಅವಧಿಯನ್ನು ವಿಸ್ತರಿಸುವ ಪ್ರಶ್ನೆಯೇ ಇಲ್ಲ. ಸಮೀಕ್ಷೆಯನ್ನು ವೇಗಗೊಳಿಸಬೇಕಾಗುತ್ತದೆ. ಇಂದಿನಿಂದ, ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಇದು ಚುರುಕುಗೊಳ್ಳುತ್ತದೆ" ಎಂದು ಸಿಎಂ ತಿಳಿಸಿದರು.

"ಜಿಲ್ಲಾಧಿಕಾರಿಗಳ ಪ್ರಕಾರ, ಶೇ. 90 ಕ್ಕೂ ಹೆಚ್ಚು ಸಮಸ್ಯೆಗಳನ್ನು ಪರಿಹರಿಸಲಾಗಿದೆ ಮತ್ತು ಉಳಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ನಾನು ಆಯೋಗ ಮತ್ತು ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಬಹುಶಃ ಇಂದೇ ಪರಿಹರಿಸಲಾಗುವುದು ಎಂದರು.

ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳು ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸಿ ಯಾವುದೇ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಇದಲ್ಲದೆ, ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಸಮೀಕ್ಷೆಯ ಮೇಲ್ವಿಚಾರಣೆ ಮಾಡಲು ಸೂಚಿಸಲಾಗಿದೆ ಎಂದರು.

"ಇಲ್ಲಿಯವರೆಗೆ, ಪ್ರತಿದಿನ ಕೇವಲ ಶೇ. 2.4 ರಷ್ಟು ಸಮೀಕ್ಷೆಯ ಪ್ರಗತಿ ಸಾಧಿಸಲಾಗಿದೆ. ಇನ್ನುಮುಂದೆ ಪ್ರತಿದಿನ ಕನಿಷ್ಠ ಶೇ. 10 ರಷ್ಟು ಪ್ರಗತಿ ಸಾಧಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ" ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಎಲ್ಲಾ 1.43 ಕೋಟಿ ಕುಟುಂಬಗಳನ್ನು ಒಳಗೊಳ್ಳುವುದು ಗುರಿಯಾಗಿದ್ದರೂ, ಇಲ್ಲಿಯವರೆಗೆ ಕೇವಲ 2.76 ಲಕ್ಷ ಕುಟುಂಬಗಳನ್ನು ಮಾತ್ರ ಸಮೀಕ್ಷೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣತಿದಾರರಿಗೆ ಸಂಭಾವನೆ ನೀಡುವ ಭರವಸೆ ನೀಡಿದ ಸಿದ್ದರಾಮಯ್ಯ, "ಕೆಲವು ಸ್ಥಳಗಳಲ್ಲಿ ಶಿಕ್ಷಕರಿಂದ(ಗಣತಿದಾರರು) ಪ್ರತಿರೋಧ ವ್ಯಕ್ತವಾಗುತ್ತಿದೆ ಎಂಬ ವರದಿಗಳಿವೆ. ಆದರೆ ಇದು ತಪ್ಪು ಕಲ್ಪನೆ. ಶಿಕ್ಷಕರಿಂದ ಯಾವುದೇ ಪ್ರತಿರೋಧ ಬಂದಿಲ್ಲ. ಯಾರಾದರೂ ವಿರೋಧಿಸಿ ಸಹಕರಿಸದಿದ್ದರೆ, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು" ಎಂದರು.

ಇದೇ ವೇಳೆ "ನ್ಯಾಯಾಲಯವು ವಿಧಿಸಿರುವ ಎಲ್ಲಾ ಷರತ್ತುಗಳನ್ನು ಅನುಸರಿಸಲಾಗುವುದು" ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Sonam Wangchuk Arrested: NSA ಅಡಿ ಕೇಸ್; ಜಾಮೀನು ಸಿಗುವ ಸಾಧ್ಯತೆಯೇ ಇಲ್ಲ!

Asia Cup 2025: Indian Army ಕುರಿತು ವ್ಯಂಗ್ಯ, ಪಾಕ್ ಕ್ರಿಕೆಟಿಗ Haris Rauf ಗೆ ಬರೆ ಹಾಕಿದ ICC, ದಂಡ, ಫರ್ಹಾನ್ ಗೂ ಎಚ್ಚರಿಕೆ!

'I Love Muhammed' row: ಬರೇಲಿಯ ಮಸೀದಿ ಹೊರಗೆ ಸ್ಥಳೀಯ ಮುಸ್ಲಿಮರು, ಪೊಲೀಸರ ನಡುವೆ ಭಾರಿ ಘರ್ಷಣೆ! ಕಾರಣವೇನು?

Cricket: 'ಅವರ ''ಗರ್ವ'' ಮುರಿಯಿರಿ'..: Asia Cup Final ನಲ್ಲಿ ಭಾರತ ಮಣಿಸಲು Shoaib Akhtar ಮಾಸ್ಟರ್ ಪ್ಲಾನ್!

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ 'ಅಕ್ಷರ ಮಾಂತ್ರಿಕ'ನ ಅಂತ್ಯಕ್ರಿಯೆ

SCROLL FOR NEXT