ಬಿಜೆಪಿ (ಸಂಗ್ರಹ ಚಿತ್ರ) online desk
ರಾಜ್ಯ

I Love Muhammad ಪೋಸ್ಟರ್‌ ವಿವಾದ: ಮುಂದಿನ ಪರಿಸ್ಥಿತಿಗೆ ನೀವೇ ಕಾರಣರಾಗುತ್ತೀರಿ; ಪೊಲೀಸರಿಗೆ BJP ಎಚ್ಚರಿಕೆ

ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸಿ ಭಯಗ್ರಸ್ತ ವಾತಾವರಣ ಉಂಟುಮಾಡಿದ ಮುಸ್ಲಿಂ ಕೋಮುವಾದಿ ದುಷ್ಕರ್ಮಿಗಳನ್ನು ಪೊಲೀಸರು ಈ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಿ.

ಬೆಂಗಳೂರು: ಹಿಂದೂಗಳ ವಿರುದ್ಧ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಪರಿಸ್ಥಿತಿಗೆ ನೀವೇ ಕಾರಣರಾಗುತ್ತೀರಿ ಎಂದು ಪೊಲೀಸರಿಗೆ ಬಿಜೆಪಿ ಶುಕ್ರವಾರ ಎಚ್ಚರಿಕೆ ನೀಡಿದೆ.

ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಈದ್ ಮಿಲಾದ್ ಹಬ್ಬ , ಮೆವರಣಿಗೆ ಸಂದರ್ಭದಲ್ಲಿ ಅಳವಡಿಸಲಾಗಿದ್ದ, ಐ ಲವ್ ಮೊಹಮ್ಮದ್‌ ಪೋಸ್ಟರ್‌ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂ ಸಮುದಾಯದ ಮೇಲಿನ ಕೋಮುವಾದಿ ದುಷ್ಟರ ದಾಳಿ ಸರಣೀ ರೂಪದಲ್ಲಿ ಮುಂದುವರೆಯುತ್ತಲೇ ಇದೆ. ನಿನ್ನೆ ದಾವಣಗೆರೆಯಲ್ಲಿ ಕೋಮು ಉದ್ವಿಗ್ನತೆ ಪ್ರಚೋದಿಸುವ ಬ್ಯಾನರ್ ಅಳವಡಿಸಿ ಹಿಂದೂ ಸಮುದಾಯದ ಮನೆಗಳನ್ನು ಟಾರ್ಗೆಟ್ ಮಾಡಿ ಕಲ್ಲು ತೂರಾಟ ನಡೆಸಿ ಆತಂಕಮಯ ವಾತಾವರಣ ಸೃಷ್ಟಿಸಿ ಹಿಂದುಗಳ ಮೇಲೆ ದೌರ್ಜನ್ಯ ಎಸಗಿರುವ ಘಟನೆ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸಿ ಭಯಗ್ರಸ್ತ ವಾತಾವರಣ ಉಂಟುಮಾಡಿದ ಮುಸ್ಲಿಂ ಕೋಮುವಾದಿ ದುಷ್ಕರ್ಮಿಗಳನ್ನು ಪೊಲೀಸರು ಈ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಿ. ದೇಶದ ಹಲವೆಡೆಗಳಲ್ಲಿ "ಐ ಲವ್ ಮೊಹಮ್ಮದ್" ಎಂಬ ಬ್ಯಾನರ್ ಅಳವಡಿಸಿ ಹಿಂದೂಗಳನ್ನು ಪ್ರಚೋದಿಸಲೆಂದೇ ವಿವಾದ ಹುಟ್ಟುಹಾಕಲಾಗಿದ್ದು, ಇದು ದಾವಣಗೆರೆ ಮೂಲಕ ರಾಜ್ಯವನ್ನೂ ಪ್ರವೇಶಿಸಿದೆ.

ಪೋಲಿಸ್ ಇಲಾಖೆ ಅತ್ಯಂತ ಗಂಭೀರವಾಗಿ ಈ ಘಟನೆಯನ್ನು ಪರಿಗಣಿಸಿ ಕೋಮುವಾದಿ ದುಷ್ಟರ ಅಟ್ಟಹಾಸ ರಾಜ್ಯದ ಇತರೆಡೆಗಳಲ್ಲೂ ಪಸರಿಸದಂತೆ ಈ ಕೂಡಲೇ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿರುವ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಹೋದರೆ ಪರಿಸ್ಥಿತಿ ಗಂಭೀರ ತಿರುವು ಪಡೆಯಲು ಪೊಲೀಸರೇ ಕಾರಣರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!