ಕಾವೇರಿ ಆರತಿ 
ರಾಜ್ಯ

ಮಂಡ್ಯ: KRS ಬೃಂದಾವನದಲ್ಲಿ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ!

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು.

ಮಂಡ್ಯ: ಕೆಆರ್ ಎಸ್ ಅಣೆಕಟ್ಟು ಬಳಿ 'ಗಂಗಾರತಿ' ಮಾದರಿಯಲ್ಲಿ ರೂ. 92 ಕೋಟಿ ವೆಚ್ಚದ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ಶುಕ್ರವಾರ ವಿದ್ಯುಕ್ತ ಚಾಲನೆ ದೊರೆತಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು. ಬಳಿಕ ಶಿಲಾ ಫಲಕವನ್ನು ಸಚಿವರು ಅನಾವರಣಗೊಳಿಸಿದರು. ಇದಕ್ಕೂ ಮುನ್ನ ಕಾವೇರಿ ಆರತಿ ಕುರಿತ ಕಿರುಚಿತ್ರ ಪ್ರದರ್ಶಿಸಲಾಯಿತು.

ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚಿನ ವೈದಿಕರ ತಂಡ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಜಲಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ನಿಶ್ಚಲಾನಂದ ನಾಥ ಸ್ವಾಮೀಜಿ, ಸಚಿವ ಶಿವರಾಜ ತಂಗಡಗಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಐದು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಇದನ್ನು ವೀಕ್ಷಿಸಲು ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT