ಕಾವೇರಿ ಆರತಿ 
ರಾಜ್ಯ

ಮಂಡ್ಯ: ಕೆಆರ್ ಎಸ್ ಬಳಿ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ!

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು.

ಮಂಡ್ಯ: ಕೆಆರ್ ಎಸ್ ಅಣೆಕಟ್ಟು ಬಳಿ 'ಗಂಗಾರತಿ' ಮಾದರಿಯಲ್ಲಿ ರೂ. 92 ಕೋಟಿ ವೆಚ್ಚದ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ಶುಕ್ರವಾರ ವಿದ್ಯುಕ್ತ ಚಾಲನೆ ದೊರೆತಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು. ಬಳಿಕ ಶಿಲಾ ಫಲಕವನ್ನು ಸಚಿವರು ಅನಾವರಣಗೊಳಿಸಿದರು. ಇದಕ್ಕೂ ಮುನ್ನ ಕಾವೇರಿ ಆರತಿ ಕುರಿತ ಕಿರುಚಿತ್ರ ಪ್ರದರ್ಶಿಸಲಾಯಿತು.

ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚಿನ ವೈದಿಕರ ತಂಡ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಜಲಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ನಿಶ್ಚಲಾನಂದ ನಾಥ ಸ್ವಾಮೀಜಿ, ಸಚಿವ ಶಿವರಾಜ ತಂಗಡಗಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಐದು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಇದನ್ನು ವೀಕ್ಷಿಸಲು ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia CUP2025: 'ಸೂಪರ್ ಓವರ್' ಪಂದ್ಯದಲ್ಲಿ ಲಂಕಾ ಮಣಿಸಿದ ಭಾರತ! ಫೈನಲ್ ಗೆ ಲಗ್ಗೆ

Israel 'must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು 'ಉದ್ಧಟತನದ ಭಾಷಣ'; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು walk out!

Rahul-Priyanka Bond: ರಾಹುಲ್- ಪ್ರಿಯಾಂಕಾ ಬಾಂಧವ್ಯದ ಬಗ್ಗೆ ಬಿಜೆಪಿಯ ಕೈಲಾಶ್ ವರ್ಗಿಯಾ ವಿವಾದಾತ್ಮಕ ಹೇಳಿಕೆ!

ಸಿನಿಮಾ ಟಿಕೆಟ್, ಟಿವಿ ಚಾನಲ್ ಗಳ ಮೇಲೆ ಶೇ.2 ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದು: ಇದರ ಪರಿಣಾಮ ಏನು...?

'ಭಾರತ ಶತ್ರು ರಾಷ್ಟ್ರ.. Donald Trump ನೊಬೆಲ್ ಪ್ರಶಸ್ತಿಗೆ ಅರ್ಹ'; ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif

SCROLL FOR NEXT