ಸಂಗ್ರಹ ಚಿತ್ರ 
ರಾಜ್ಯ

ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ..!

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳ ಇತ್ತೀಚಿನ ಸಮೀಕ್ಷೆಯ ವೇಳೆ 7.70 ಲಕ್ಷ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಲಾಗಿದೆ.

ಉಡುಪಿ: ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ​​ಮುನಿಯಪ್ಪ ಶುಕ್ರವಾರ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳ ಇತ್ತೀಚಿನ ಸಮೀಕ್ಷೆಯ ವೇಳೆ 7.70 ಲಕ್ಷ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಲಾಗಿದೆ. ಕರ್ನಾಟಕದಲ್ಲಿ ಈ 7.70 ಲಕ್ಷ ಪಡಿತರ ಚೀಟಿದಾರರನ್ನು ಬಿಪಿಎಲ್ ವರ್ಗದಿಂದ ಎಪಿಎಲ್‌ಗೆ ಬದಲಾಯಿಸಲಾಗುತ್ತದೆ ಎಂದು ಹೇಳಿದರು.

ಹಿಂದಿನ ಸರ್ಕಾರಗಳು ಯಾವುದೇ ಪರಿಶೀಲನೆ ಇಲ್ಲದೆ ಜನರಿಗೆ ಬಿಪಿಎಲ್ ಕಾರ್ಡ್ ಗಳನ್ನು ನೀಡುತ್ತಲೇ ಇದ್ದವು. ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯಗಳು ಶೇ.50ಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿಲ್ಲ. ಆದರೆ, ನಮ್ಮ ರಾಜ್ಯ ಶೇ.75ಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದೆ. ಅಭಿವೃದ್ಧಿ ಹೊಂದಿದ ರಾಜ್ಯವಾಗಿದ್ದರೂ ಕರ್ನಾಟಕವು 1.28 ಕೋಟಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರನ್ನು ಹೊಂದಿದೆ.

ಹೀಗಾಗಿಯೇ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ನಡೆಯುತ್ತಿದೆ. ಪಡಿತರ ಚೀಟಿಗಳನ್ನು ಬಿಪಿಎಲ್ ನಿಂದ ಎಪಿಎಲ್ ಗೆ ತಪ್ಪಾಗಿ ಬದಲಾಯಿಸಿದ್ದರೆ, ಅಂತಹ ಫಲಾನುಭವಿಗಳು ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಅವರಿಗೆ ಒಂದು ದಿನದೊಳಗೆ ಆಹಾರ ಧಾನ್ಯಗಳನ್ನು ಪೂರೈಸಲಾಗುವುದು. ಈ ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ಬಳಿಕೃ ಪಡಿತರ ಚೀಟಿಗಳಿಗೆ ಹೊಸ ಅರ್ಜಿಗಳಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್