ಬೆಂಗಳೂರು-ಮುಂಬೈ ಸೂಪರ್‌ಫಾಸ್ಟ್ ರೈಲು 
ರಾಜ್ಯ

ಕೊನೆಗೂ ಈಡೇರಿದ 30 ವರ್ಷದ ಬೇಡಿಕೆ: ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ; ತೇಜಸ್ವಿ ಸೂರ್ಯ

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್‌ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ.

ಕಳೆದ ಮೂರು ದಶಕಗಳಲ್ಲಿ ಎರಡೂ ನಗರಗಳ ಬೆಳವಣಿಗೆಯ ಹೊರತಾಗಿಯೂ, ಬೆಂಗಳೂರು ಮತ್ತು ಮುಂಬೈ ನಡುವೆ ಕೇವಲ ಒಂದು ಸೂಪರ್‌ಫಾಸ್ಟ್ ರೈಲು ಮಾತ್ರ ಇತ್ತು. ಕಳೆದ ವರ್ಷವೊಂದರಲ್ಲೇ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲಕರವಾಗಿಸಲಿದೆ ಎಂದು ಹೇಳಿದ್ದಾರೆ.

ಈ ವಿಷಯದ ಕುರಿತಾಗಿ ಕಳೆದ ನಾಲ್ಕು ವರ್ಷಗಳಿಂದ ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಳಲ್ಲಿ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ನಿರಂತರ ಪ್ರಯತ್ನದ ಫಲವಾಗಿದೆ. ಈ ಹೊಸ ರೈಲು ಪ್ರಯಾಣದ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಮತ್ತು ವಿಮಾನ ಹಾಗೂ ಬಸ್‌ಗಳಿಗೆ ಆರಾಮದಾಯಕವಾದ ಪರ್ಯಾಯವನ್ನು ಒದಗಿಸುತ್ತದೆ. ಅಲ್ಲದೆ, ಇದು ಎರಡು ಮಹಾನಗರಗಳ ನಡುವಿನ ಆರ್ಥಿಕ ಮತ್ತು ಸಾಮಾಜಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ.

ಕರ್ನಾಟಕದ ಜನತೆ ಮತ್ತು ಕನ್ನಡಿಗರ ಪರವಾಗಿ, ಈ ಬಹುಕಾಲದ ಕನಸನ್ನು ನನಸಾಗಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ತೇಜಸ್ವಿ ಸೂರ್ಯ ಕೃತಜ್ಞತೆಯನ್ನು ಸಲ್ಲಿಸಿದ್ದು, ಈ ಕಾರ್ಯಕ್ಕೆ ಬೆಂಬಲ ನೀಡಿದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೂ ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT